News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಕೆಪಿಸಿಸಿ ಸದಸ್ಯ ಹೆಚ್. ಎಂ. ನಂದಕುಮಾರ್ ಅಭಿಮಾನಿಗಳಿಂದ ಬೃಹತ್ ಸಮಾವೇಶ

Sullia Assembly Constituency Election
Photo Credit : News Kannada

ಮಂಗಳೂರು: ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದು , ರಾಜ್ಯದ ಪ್ರಮುಖ ಕಾಂಗ್ರೇಸ್ ನಾಯಕರಿಗೆ ಈ ವಿಚಾರ ಹಲವು ರೀತಿಯಲ್ಲಿ ತೋರಿಸಿ ಕೊಟ್ಟಿರುವ ನಂದಕುಮಾರ್ ಅಭಿಮಾನಿಗಳು, ಇಂದು ಮುಂದುವರಿದು ನಿಂತಿಕಲ್ಲಿನಲ್ಲಿ ಬೃಹತ್ ಸಮಾವೇಶ ನಡೆಸಿದ್ದಾರೆ.

ಈ ಸಮಾವೇಶ ನಡೆಸಿದ್ದಲ್ಲಿ, ನಡೆಸುವುವವರ ವಿರುದ್ದ ಕ್ರಮ ಜರುಗಿಸುವ ಬೆದರಿಕೆಯನ್ನು ಬ್ಲಾಕ್ ಕಾಂಗ್ರೇಸ್ ಸ್ಪಷ್ಟಪಡಿಸಿತ್ತು ಆದರೆ ಎ.9 ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್‌ನ ಲಕ್ಷ್ಮೀ ವೆಂಕಟ್ರಮಣ ಸಭಾಭವನದಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ.‌

ಸಭಾಭವನ ಎಲ್ಲಾ ಆಸನಗಳು ಭರ್ತಿಯಾಗಿದ್ದು, ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಮಹಿಳೆಯರು ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು