ಸುಳ್ಯ: ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನೂರಾರು ಕಾರ್ಯಕರ್ತರೊಂದಿಗೆ ಬಂದು ಇಂದು ನಾಮಪತ್ರ ಸಲ್ಲಿಸಿದರು. ಸುಳ್ಯದ ಶ್ರೀ ರಾಮ ಪೇಟೆಯಿಂದ ಆರಂಭಗೊಂಡ ಮೆರವಣಿಗೆಗೆ ಮಾಜೀ ಮುಖ್ಯಮಂತ್ರಿ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ತೆಂಗಿನಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು.
ಸುಳ್ಯ ತಾಲೂಕು ಕಚೇರಿಯಲ್ಲಿ ಸಚಿವ ಅಂಗಾರ, ಮಂಡಲ ಅದ್ಯಕ್ಷ ಹರೀಶ್ ಕಂಜಿಪಿಲಿ, ಎ ವಿ ತೀರ್ಥರಾಮ , ಶೀಪತಿ ಭಟ್ ಮಜಿಗುಂಡಿ ಜೊತೆ ಆಗಮಿಸಿದ ಭಾಗೀರಥಿ ಮುರುಳ್ಯ, ಚುನಾವಣಾಧಿಕಾರಿ ಅರುಣ್ ಕುಮಾರ್ ರಿಗೆ ನಾಮ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಹಶೀಲ್ದಾರ್ ಮಂಜುನಾಥ್, ಕಡಬ ತಹಶೀಲ್ದಾರ್, ರಮೇಶ್ ಬಾಬು ಮೊದಲಾದವರಿದ್ದರು.