News Karnataka Kannada
Saturday, May 04 2024
ಮಂಗಳೂರು

ಸುಳ್ಯ: ವೋಟರ್ಸ್ ಸ್ಲಿಪ್ ಜೊತೆ ಕರಪತ್ರ ಹಂಚಿದ ಆರೋಪ‌, ಸಮಗ್ರ ತನಿಖೆಗೆ ಚುನಾವಣಾಧಿಕಾರಿ ಆದೇಶ

BJP to stage series of protests over failure to implement guarantee scheme
Photo Credit : News Kannada

ಸುಳ್ಯ: ವೋಟರ್ಸ್ ಸ್ಲಿಪ್ ಅನ್ನು ಮತದಾರರ ಮನೆಗೆ ತಲುಪಿಸುವ ವೇಳೆ ಬಿಜೆಪಿ ಪಕ್ಷದ ಪ್ರಚಾರದ ಕರಪತ್ರವನ್ನು ಕೂಡ ಜತೆಗೆ ವಿತರಿಸಿದ್ದಾರೆ ಎಂದು ಆರೋಪ‌ ಕೇಳಿಬಂದಿದ್ದು ಬಿಎಲ್‌ಒಗಳಿಬ್ಬರ ಮೇಲೆ ತನಿಖೆ ನಡೆಸಲು ಸುಳ್ಯ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಾಲ್ಸೂರು ಗ್ರಾಮದ ಎರಡು ಬೂತ್ ಗಳಲ್ಲಿ ಬಿ.ಜೆ.ಪಿ.ಯ ಪ್ರಚಾರ ಸಾಮಾಗ್ರಿಯನ್ನು ವೋಟರ್ಸ್ ಸ್ಲಿಪ್ ನೊಂದಿಗೆ ಕೊಟ್ಟಿರುವುದಾಗಿ ಹೇಳಲಾಗಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ಬಂದಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾಧಿಕಾರಿಗಳು ಈ ಬಗ್ಗೆ ತನಿಖೆಗೆ ತಾ.ಪಂ. ಸಿಇಒಗೆ ಸೂಚನೆ ನೀಡಿದ್ದಾರೆ. ಇದೇ ಕ್ಷೇತ್ರದ ಅಮರಮುಡ್ನೂರು ಗ್ರಾಮದಲ್ಲೂ ಇಂತಹುದೇ ಪ್ರಕರಣ ನಡೆದಿರುವುದಾಗಿ ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು