ಸುಳ್ಯ: ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆ ಕಾಲು ಸಂಕದಿಂದ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಮೂರು ದಿವಸದಿಂದ ಕಾರ್ಯಾಚರಣೆ ಮಾಡುತ್ತಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ನಾಲ್ಕನೇ ದಿವಸದ ಕಾರ್ಯಾಚರಣೆ ಬಳಿಕ ಪೆರಾಜೆಯ ನೆಡ್ಚಿಲ್ ಸಮೀಪದ ಕಣಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ದಳ, ಎಸ್ಡಿಆಎರ್ ಎಫ್ ತಂಡ, ಅಗ್ನಿಶಾಮಕ ದಳ ಸುಳ್ಯ, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ, SKSSF ಅರಂತೋಡು ಕಲ್ಲುಗುಂಡಿ ವಿಖಾಯ ತಂಡ, ಕಂದಾಯ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯತ್ ಸಿಬ್ಬಂದಿ, ಸುಳ್ಯ-ಪೆರಾಜೆಯ ಮುಳುಗು ತಜ್ಞರಿಂದ ಕಾರ್ಯಾಚರಣೆ ನಡೆದಿತ್ತು. ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆಯಲ್ಲಿ ಜು.6 ರ ಸಂಜೆಗೆ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಕಾರ್ಮಿಕ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ಶುಕ್ರವಾರ ಬೆಳಗ್ಗಿನಿಂದ ಆರಂಭಗೊಂಡರರೂ ಕಾರ್ಮಿಕನ ಸುಳಿವು ಲಭ್ಯವಾಗಿಲ್ಲ.