News Karnataka Kannada
Sunday, April 28 2024
ಮಂಗಳೂರು

ಸುಳ್ಯದಲ್ಲಿ ಸರಕಾರದ ಮಹತ್ವಾಕಾಂಕ್ಷೆಯ “ಶಕ್ತಿ ” ಯೋಜನೆಗೆ ಚಾಲನೆ

Government launches ambitious "Shakti" project
Photo Credit : News Kannada

ಸುಳ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ಸುಳ್ಯ ಘಟಕ ವ್ಯಾಪ್ತಿಯಲ್ಲಿ “ಶಕ್ತಿ” ಯೋಜನೆಗೆ ಚಾಲನೆ ಕಾರ್ಯಕ್ರಮ ರವಿವಾರ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆಯಿತು.

ಸುಳ್ಯ ತಹಶೀಲ್ದಾರ್ ಮಂಜುನಾಥ್ ಜಿ. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಕ್ತಿ ಯೋಜನೆ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು ಮಹಿಳೆಯರಿಗೆ ಪ್ರಯೋಜನಕಾರಿಯಾಗಿದೆ ಎಂದು ಹೇಳಿ ಶುಭಹಾರೈಸಿದರು. ಸುಳ್ಯ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ “ಶಕ್ತಿ” ಯೋಜನೆಗೆ ಚಾಲನೆ ನೀಡಿದರು.

ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ನ.ಪಂ. ಸದಸ್ಯರಾದ ಶರೀಫ್ ಕಂಠಿ, ಡೇವಿಡ್‌ ಧೀರಾ ಕ್ರಾಸ್ತಾ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆ.ಎಸ್.ಆರ್.ಟಿ.ಸಿ.ಯ ಮಂಜುನಾಥ್ ದೇವರಾಜ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಿಹಿ ಹಂಚಿ, ಹೂ ನೀಡಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಚಾಲನೆ ನೀಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು