News Karnataka Kannada
Sunday, April 28 2024
ಮಂಗಳೂರು

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

Sullia: Lokayukta arrests village accountant for accepting bribe
Photo Credit : News Kannada

ಸುಳ್ಯ: ಹಣದ ಬೇಡಿಕೆ ಇಟ್ಟು ಲಂಚ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸಂಪಾಜೆ-ಅರಂತೋಡಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಚಕ ಟ್ವಿಸ್ಟ್ ಲಭಿಸಿದೆ. ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಅವರನ್ನು ಲೋಕಾಯುಕ್ತ ಪೊಲೀಸರು ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಲೋಕಾಯುಕ್ತ ಎಸ್ ಪಿ ಸೈಮನ್ ಮಾತನಾಡಿ, ದೂರು ಸ್ವೀಕರಿಸಿ ನಾವು ತನಿಖೆ ಮಾಡಿದ್ದೇವೆ. ಎರಡು ದಿನ ಮುಂಚೆಯೇ ದೂರು ದಾಖಲಾಗಿತ್ತು. ಗ್ರಾಮ ಕರಣಿಕ ಕೆಲಸ ಮಾಡಿಸಿಕೊಡುವುದಕ್ಕೆ ಮುಂಗಡವಾಗಿ ಮೂರು ಸಾವಿರ ರೂ. ಹಣ ಪಡೆದುಕೊಂಡಿದ್ದರು. ಇದೀಗ 5 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮುಂದೆ ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಅರಂತೋಡಿನ ವ್ಯಕ್ತಿಯೊಬ್ಬರು ಹಕ್ಕು ಖುಲಾಸೆಗಾಗಿ ಅರ್ಜಿ ಸ್ವೀಕರಿಸಿದ್ದರು. ಈ ವೇಳೆ ಕಡತ ವಿಲೇವಾರಿಗಾಗಿ ಗ್ರಾಮ ಲೆಕ್ಕಾಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಇಂದು (ಶನಿವಾರ) ಹಣ ಸ್ವೀಕರಿಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಸುಳ್ಯ ತಾಲೂಕು ಕಚೇರಿಯಲ್ಲಿ ಇದೀಗ ಗ್ರಾಮ ಲೆಕ್ಕಾಧಿಕಾರಿಯ ವಿಚಾರಣೆಯನ್ನು ನಡೆಸಿದರು. ಎಷ್ಟು ಹಣ ತೆಗೆದುಕೊಂಡಿದ್ದಾರೆ ಅನ್ನುವುದು ಇನ್ನೂ ಗೊತ್ತಾಗಿಲ್ಲ. ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು