News Karnataka Kannada
Tuesday, April 30 2024
ಮಂಗಳೂರು

ಸುಳ್ಯ: ಬ್ಯಾಂಕ್ ಗೆ ಬೆಂಕಿ ಹಚ್ಚಿ ತಾನು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ  ಅನ್ನೋ ಕಾರಣಕ್ಕೆ ಲಿವ್ ಇನ್ ಪಾರ್ಟನರ್ ಆಗಿದ್ದ ಮಹಿಳೆಯನ್ನ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಹರಿಯಾಣದಲ್ಲಿ ನಡೆದಿದೆ.
Photo Credit : News Kannada

ಸುಳ್ಯ: ಸಾಲದ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ, ಸುಳ್ಯದ ರಥಬೀದಿಯಲ್ಲಿರುವ  ಖಾಸಗಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ ಶಿವಣ್ಣಗೌಡ ಎಂಬವರು ಈ ರೀತಿ ಮಾಡಲು ಯತ್ನಿಸಿರುವ ವ್ಯಕ್ತಿ.

ಅವರು ಫೆ.20 ರಂದು ರಥಭೀದಿಯ ಸರಸ್ವತಿ ಸೌಹಾರ್ಧ ಬ್ಯಾಂಕ್ ಗೆ 10 ಗಂಟೆ ಸುಮಾರಿಗೆ ನುಗ್ಗಿದ್ದು ತಾನು ಪಡೆದಿರುವ ಸಾಲದ ಕಂತಿನ ವಿವರದಲ್ಲಿ ಮಾತುಕಥೆ ನಡೆಸುತ್ತಾ ತಾನು ತಂದಿರುವ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಚೆಲ್ಲಿ ಈಗಲೇ ‌ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದಲ್ಲದೆ, ನೋಡ ನೋಡುತ್ತಿದ್ದಂತೆ ಪೆಟ್ರೋಲ್ ಚೆಲ್ಲಿ ಲೈಟರ್ ನಿಂದ ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಕೂಡಲೇ ಬ್ಯಾಂಕಿನ ಸಿಬ್ಬಂದಿಗಳು ಆತನನ್ನು ತಡೆದು ಪೋಲಿಸರಿಗೆ ದೂರವಾಣಿಯಲ್ಲಿ ಸಂಪರ್ಕಿಸಿದ್ದಾರೆ.

ಪೋಲಿಸರು ಸ್ಥಳಕ್ಕೆ ಧಾವಿಸಿ ಶಿವಣ್ಣ ಗೌಡ ಮತ್ತು ಆತನ ಸ್ಕೂಟರ್ ಸಮೇತ ಠಾಣೆಗೆ ಹೊತ್ತೊಯ್ದಿದ್ದಾರೆ, ಶಿವಣ್ಣ ಗೌಡ ಆಸ್ತಿ ಖರೀದಿಗೆ
ಬ್ಯಾಂಕಿನಿಂದ ಸಾಲವನ್ನು ಪಡೆದಿದ್ದರು, ಹಲವು ಕಂತು ಬಾಕಿಯಾಗಿದ್ದು, ಆಸ್ತಿ ಮುಟ್ಟುಗೂಲು ಹಾಕಲು ತಯಾರಿಯಾಗಿತ್ತು, ಇದರಿಂದ ಬೇಸತ್ತ ಅವರು ಈ ಕೃತ್ಯಕ್ಕೆ ಯತ್ನಿಸಿದ್ದಾರೆ, ಒಟ್ಟಿನಲ್ಲಿ ಬ್ಯಾಂಕ್ ಸುಳ್ಯ ಶಾಖೆಯ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಸಂಭಾವ್ಯ ಭಾರೀ ಅನಾಹುತ ತಪ್ಪಿದಂತಾಗಿದೆ.

ಸಹಾಯವಾಣಿಗೆ ಕರೆ ಮಾಡಿ: ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು