ಸುಳ್ಯ: ಮೂರು ದಿನಗಳ ಹಿಂದೆ ಮನೆಯಿಂದ ಕೆಲಸಕ್ಕೆ ಹೋಗಿದ್ದ ವ್ಯಕ್ತಿ ಜ.19ರಂದು ಪಂಜ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಇವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ಬಾರದಿದ್ದುದರಿಂದ ಮನೆಯವರು ಹುಟುಕಾಟ ನಡೆಸಿದ್ದಾರೆ.
ಇದೀಗ ಜ.19 ಕೂತ್ಕುಂಜ ಗ್ರಾಮದ ಸಂಪ ಎಂಬಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಮನೆಯವರು ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ ಪಡಿಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ತೆರಳಿದ್ದಾರೆ.
ಸಾವಿನ ಕುರಿತು ಪೋಲೀಸ್ ತನಿಖೆ ನಂತರ ಸ್ಪಷ್ಟ ಮಾಹಿತಿ ದೊರಕಲಿದೆ.