News Karnataka Kannada
Sunday, May 05 2024
ಮಂಗಳೂರು

ಸುಳ್ಯ: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ

sullia-student-assaulted-for-talking-to-student
Photo Credit : News Kannada

ಸುಳ್ಯ:  ಕೊಡಿಯಾಲಬೈಲು  ಕಾಲೇಜಿನ ವಿದ್ಯಾರ್ಥಿನಿ ಹಾಗೂ ಅದೇ ಕಾಲೇಜಿನ ವಿದ್ಯಾರ್ಥಿ ಮಾತನಾಡುತ್ತಿದ್ದಾರೆ ಎಂಬ ಕಾರಣಕ್ಕಾಗಿ ತಂಡವೊಂದು ವಿದ್ಯಾರ್ಥಿ ಗಂಭೀರ ಹಲ್ಲೆ ನಡೆಸಿದ್ದು ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೀಕ್ಷಿತ್ ಧನುಶ್ ಪ್ರಜ್ವಲ್ ತನೋಜ್ ಅಕ್ಷಯ್ ಮೋಕ್ಷಿತ್ ಗೌತಮ್ ಹಾಗೂ ಇತರರ ವಿರುದ್ಧ ವಿವಿಧ ಸೆಕ್ಷನ್ ಐಪಿಸಿ ಪ್ರಕಾರ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಕೊಡಿಯಾಲಬೈಲು ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಮಹಮ್ಮದ್ ಸನಿಫ್ ಎಂದು ತಿಳಿದುಬಂದಿದೆ.

ಕಾಲೇಜಿನ ವಿದ್ಯಾರ್ಥಿಯೊಬ್ಬಳು ತನ್ನ ಸ್ನೇಹಿತೆಯಾಗಿದ್ದು ಆಕೆಯೊಂದಿಗೆ ಮಾತನಾಡುವುದು ಕೆಲವರಿಗೆ ಇಷ್ಟವಿಲ್ಲದ ಕಾರಣ ಅಗಸ್ಟ್ 30 ರಂದು ಬೆಳಿಗ್ಗೆ 10.30 ಕ್ಕೆ ನಾನು ಕ್ಲಾಸ್ ರೂಮ್ ನಲ್ಲಿರುವಾಗ ನಮ್ಮ ಕಾಲೇಜಿನಲ್ಲಿ ಓದಿದ ಅಂತಿಮ ವರ್ಷದ ಬಿಬಿಎಂ ವಿದ್ಯಾರ್ಥಿಗಳಾದ ದೀಕ್ಷಿತ್ ಮತ್ತು ಧನುಷ್ ಎಂಬವರು ಕ್ಲಾಸ್ ರೂಮಿನಿಂದ ನನ್ನನ್ನು ಕರೆದು ಮಾತನಾಡಲು ಇದೆ ಎಂದು ಹೇಳಿ ಕಾಲೇಜಿನ ಗ್ರೌಂಡ್ ಗೆ ಕರೆದುಕೊಂಡು ಹೋಗಿ ಅಲ್ಲೇ ಇದ್ದ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ತನುಜ್ ಅಕ್ಷಯ್ ಮೋಕ್ಷಿತ್ ಹಾಗೂ ಸುಳ್ಯದ  ಖಾಸಗಿ ಕಾಲೇಜಿನ ಗೌತಮ್ ಮತ್ತಿತರರು ಕಾಲರ್ ಪಟ್ಟಿ ಹಿಡಿದು ನೀನು ಆ ಹುಡುಗಿ ಜೊತೆ ಯಾಕೆ ಮಾತನಾಡುತ್ತೀಯಾ ಎಂದು ಹೇಳುತ್ತಾ ಅವರ ಕೈಯಲ್ಲಿದ್ದ ದೊಣ್ಣೆಯಿಂದ ನನ್ನ ಬೆನ್ನಿಗೆ ಹೊಡೆದು ನೆಲಕ್ಕೆ ದೂಡಿ ಹಾಕಿ ಕಾಲಿನಿಂದ ತುಳಿದು ಇನ್ನು ಮುಂದಕ್ಕೆ ಮಾತನಾಡಿದರೆ ನಿನ್ನನ್ನು ಜೀವಸಹಿತ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಂತರ ಮನೆಯವರಿಗೆ ವಿಷಯ ತಿಳಿಸಿ ಗಂಭೀರ ಗಾಯಗೊಂಡ ಪರಿಣಾಮ ಸುಳ್ಯ ಸರಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದೇನೆ ಹಾಗೂ ನನ್ನ ಮೇಲೆ ಹಲ್ಲೆ ಮಾಡಿದ  ದುಷ್ಕರ್ಮಿಗಳ ಮೇಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿರುವುದಾಗಿ ಮೊಹಮ್ಮದ್ ಸನಿಫ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು