News Karnataka Kannada
Sunday, May 05 2024
ಮಂಗಳೂರು

ಸುಳ್ಯ: ಔಷಧಿ ತರಲೆಂದು ಆಸ್ಪತ್ರೆಗೆ ಹೋದ ಮಹಿಳೆ ನಾಪತ್ತೆ

Sullia: Woman goes missing after going to hospital to get medicines
Photo Credit : News Kannada

ಸುಳ್ಯ: ಔಷಧಿ ತರಲು ಆಸ್ಪತ್ರೆಗೆ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿರು ಬಗ್ಗೆ ಸುಳ್ಯ ತಾಲೂಕು ಮರ್ಕಂಜ ಗ್ರಾಮದಿಂದ ವರದಿಯಾಗಿದೆ.

ಮರ್ಕಂಜದ ರಾಜಶೇಖರ ಎಂಬವರ ಪತ್ನಿ ನವ ವಿವಾಹಿತೆ ಕೀರ್ತಿಶ್ರೀ (26) ನಾಪತ್ತೆಯಾದವರು. ಇವರು ಜ. 21ರಂದು ಎಲಿಮಲೆಯಲ್ಲಿರುವ ಆಸ್ಪತ್ರೆ ಔಷಧಿಗೆ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾರೆ.

ಆರೋಗ್ಯ ಸರಿ ಇಲ್ಲವೆಂದು ನನ್ನ ಪತ್ನಿ ನನ್ನ ಬಳಿ ಹೇಳಿದ್ದು ನಾನು ಆಕೆಯನ್ನು ಆಸ್ಪತ್ರೆಗೆ ಹೋಗಲೆಂದು ನನ್ನ ಮನೆಯಿಂದ ನನ್ನ ಜೀಪಿನಲ್ಲಿ ಬೆಳಿಗ್ಗೆ 10 ಗಂಟೆಗೆ ಕರೆದುಕೊಂಡು ಹೋಗಿದ್ದು ಬಳಿಕ ಎಲಿಮಲೆಯ ಕ್ಲಿನಿಕ್ ಗೆ ಹೋಗಲೆಂದು ಆಕೆಯನ್ನು ಬಸ್ಸಿನಲ್ಲಿ ಹತ್ತಿಸಿದ್ದು,10.30 ಕ್ಕೆ ಅವಳ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ಬಳಿಕ ನಾನು ಆಕೆಯ ತಾಯಿಯ ಮನೆಗೆ ಫೋನ್ ಮಾಡಿ ಕೇಳಿದಾಗ ಅಲ್ಲಿಗೂ ಕೂಡ ಆಕೆ ಬಂದಿರುವುದಿಲ್ಲ ಎಂಬ ವಿಷಯವನ್ನು ಅವರ ತಾಯಿ ತಿಳಿಸಿರುತ್ತಾರೆ. ನಂತರ ನಮಗೆ ತಿಳಿದಿರುವ ಎಲ್ಲಾ ಕಡೆಗಳಲ್ಲಿ ಆಕೆಯ ಸಂಬಂಧಿಕರ ಮನೆಗಳಲ್ಲಿಯೂ ಕೂಡ ವಿಚಾರಿಸಿದಾಗ ಯಾವುದೇ ಮಾಹಿತಿ ಲಭಿಸಿರುವುದಿಲ್ಲ. ಆದುದರಿಂದ ತಾವುಗಳು ಕಾಣೆಯಾಗಿರುವ ನನ್ನ ಪತ್ನಿಯನ್ನು ಪತ್ತೆಹಚ್ಚಿ ಕೊಡಬೇಕೆಂದು ಸುಳ್ಯ ಪೊಲೀಸ್ ಠಾಣೆಗೆ ಪತಿ ರಾಜಶೇಖರ ದೂರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು