ಸುಳ್ಯ: ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಅರಂತೋಡು ಎಲಿಮಲೆ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೆಲ ದಿನಗಳ ಹಿಂದೆ ಗುದ್ದಲಿ ಪೂಜೆ ನಡೆಸಿ ಕಾಮಗಾರಿ ಪ್ರಾರಂಭಿಸಿ ರಸ್ತೆಯುದ್ದಕ್ಕೂ ಜಲ್ಲಿ ಹಾಕಲಾಗಿತ್ತು. ಆದರೆ ಇದೀಗ ಪುತ್ತೂರಿಗೆ ಕೇಂದ್ರ ಮಂತ್ರಿ ಅಮಿತ್ ಶಾ ಆಗಮಿಸುವ ಕಾರಣ ಪುತ್ತೂರಿನ ಕೆಲ ರಸ್ತೆಗಳನ್ನು ಸರಿಪಡಿಸಲು ಗುತ್ತಿಗೆದಾರ ಅರಂತೋಡು ಎಲಿಮಲೆ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಈ ರಸ್ತೆಯಲ್ಲಿ ಜಲ್ಲಿ ಕಲ್ಲು ಹಾಕಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರು ಕೇಳಿಬಂದಿದೆ.