ಸುರತ್ಕಲ್: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. “ಮತೀಯ ದ್ವೇಷದ ಕಾರಣ ಹತ್ಯೆಗೀಡಾದ ಅಮಾಯಕರ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಹಾಗೂ ಪರಿಹಾರ ನೀಡುವಲ್ಲಿ ಹಿಂದಿನ ಬಿಜೆಪಿ ಸರಕಾರ ಮಾಡಿರುವ ತಾರತಮ್ಯ ಧೋರಣೆಯ ಬಗ್ಗೆ ಸೂಕ್ತ ಕ್ರಮಕೈಗೊಂಡು ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಹಾಗೂ ಉಪ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದರು.
“ದೀಪಕ್ ರಾವ್, ಶರತ್ ಮಡಿವಾಳ, ಪ್ರವೀಣ್ ನೆಟ್ಟಾರ್, ಮಸೂದ್, ಫಾಝಿಲ್, ಜಲೀಲ್ ಕೃಷ್ಣಾಪುರ, ದಿನೇಶ್ ಕನ್ಯಾಡಿ ಸಹಿತ ಮತೀಯ ದ್ವೇಷದ ಕಾರಣ ನಡೆದ ಅಮಾಯಕರ ಹತ್ಯೆಯ ಆರೋಪಿಗಳಿಗೆ ಮಾತ್ರವಲ್ಲ ಅದರೊಂದಿಗೆ ಇಂತಹ ಅಮಾನವೀಯ ಕೃತ್ಯದ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ, ಈ ಬಗ್ಗೆ ಎಸ್ಐಟಿ ತನಿಖೆ ನಡೆಸುವಂತೆಯೂ ಸರಕಾರಕ್ಕೆ ಒತ್ತಾಯ ಮಾಡುತ್ತೇನೆಂದು ಇನಾಯತ್ ಅಲಿ ತಿಳಿಸಿದರು.
ಕರಾವಳಿ ಭಾಗದಲ್ಲಿ ನಡೆದಿರುವ ಎಲ್ಲಾ ಕೋಮು ಪ್ರಕರಣಗಳ ತನಿಖೆಯಾಗಬೇಕು ಮತ್ತು ಮುಂದೆ ಸಮಾಜಘಾತುಕ ಶಕ್ತಿಗಳು ತಲೆ ಎತ್ತದಂತೆ ಬಿಗಿಯಾದ ಕಾನೂನು ವ್ಯವಸ್ಥೆ ಜಾರಿಯಾಗಬೇಕು ಎಂದೂ ಹೇಳಿದರು.
ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಉಮೇಶ್ ದಂಡಕೇರಿ, ಮುಖಂಡರಾದ ಸದಾಶಿವ ಶೆಟ್ಟಿ, ಪುರುಷೋತ್ತಮ ಚಿತ್ರಾಪುರ, ಹರಿನಾಥ್, ಬಶೀರ್ ಬೈಕಂಪಾಡಿ, ಗುಲ್ಝಾರ್ ಬಾನು ಮತ್ತಿತ್ತರರು ಉಪಸ್ಥಿತರಿದ್ದರು.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…