ಸುರತ್ಕಲ್: ಬಿಎಂಆರ್ ಸಮೂಹ ಸಂಸ್ಥೆಯ ವತಿಯಿಂದ ಉಚಿತ ವೈದ್ಯಕೀಯ ಶಿಬಿರ

ಸುರತ್ಕಲ್: “ಸೇವಾ ಕಾರ್ಯಕ್ರಮಗಳ ಮೂಲಕ ಜನರನ್ನು ತಲುಪಿಸುವ ಕೆಲಸ ನಮ್ಮ ಸಂಸ್ಥೆಯದಾಗಿದೆ” ಎಂದು ಬಿಎಂಆರ್ ಸಮೂಹ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ದಾವುದ್ ಹಕೀಂ ತಿಳಿಸಿದರು.

ಅವರು ಚೊಕ್ಕಬೆಟ್ಟುವಿನ ಎಂಜಿಎಂ ವಠಾರದಲ್ಲಿ ನಡೆದ ಬಿಎಂಆರ್ ಸಮೂಹ ಸಂಸ್ಥೆಯ ವತಿಯಿಂದ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಮಾಡಲು ಉದ್ದೇಶಿಸಿದ್ದ ಇನ್ನಷ್ಟು ಸೇವಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೃಷ್ಣಾಪುರ ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಬಿ ಎಂ ಮಮ್ತಾಜ್ ಅಲಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಸೇವಾ ಕಾರ್ಯಕ್ರಮಗಳಿಗೆ ಜಮಾತ್ ವತಿಯಿಂದ ಸರ್ವ ಸಹಕಾರ ನೀಡಲಾಗುವುದು ಎಂದರು.

ಮಾಜಿ ಅಧ್ಯಕ್ಷ ಜಲೀಲ್ ಬದ್ರಿಯಾ, ಬಿಎಮ್ಆರ್ ಸಂಸ್ಥೆಯ ಚೇರ್ಮನ್ ಇಬ್ರಾಹಿಂ ಕೃಷ್ಣಾಪುರ, ಮಂಗಳಪೇಟೆಯ ಮಸೀದಿಯ ಅಧ್ಯಕ್ಷ ಹಸನಬ್ಬ ಮಂಗಳಪೇಟೆ, ಸೆರೆಕಲ್ ಸಂಸ್ಥೆಯ ಪ್ರಾಂತೀಯ ಪ್ರಬಂಧಕ ಪ್ರದೀಪ್, ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಯುವ ಮೋರ್ಚಾದ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಮಾರುಕಟ್ಟೆ ವಿಭಾಗದ ಮಸೂದ್ ಕಾಟಿಪಳ್ಳ ಉಪಸ್ಥಿತರಿದ್ದರು.

ಬಿಎಂಆರ್ ಸಂಸ್ಥೆಯ ಪ್ರಬಂಧಕ ಹನೀಫ್ ಕೃಷ್ಣಾಪುರ ವಂದಿಸಿದರು, ವಿಜೆಡಿಕ್ಷನ್ ನಿರೂಪಿಸಿದರು. ಸೆರೆಕೇರ್ ಅಫ್ ಇಂಡಿಯಾ ಸಂಸ್ಥೆ ಯ ತಜ್ಞ ವೈದ್ಯಕೀಯ ತಂಡದ ನೇತ್ರತ್ವಸಲ್ಲಿ ನಡೆದ ಶಿಬಿರದ ಸದುಪಯೋಗವನ್ನು ಸುಮಾರು 850 ಜನರು ಪಡೆದರು.

Ashika S

Recent Posts

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

6 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

8 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

9 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

31 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

43 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

53 mins ago