News Karnataka Kannada
Thursday, May 02 2024
ಮಂಗಳೂರು

ಸುರತ್ಕಲ್ ಫಾಜಿಲ್ ಹತ್ಯೆ: ಮಂಗಳೂರಿನ 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Mangaluru: Commissioner withdraws traffic ban order on bike-borne male riders
Photo Credit : Facebook

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ  ಗುರುವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಕೊಲೆಯಾಗಿದೆ. ಈ ಹಿನ್ನೆಲೆ ಮಂಗಳೂರಿನ 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್​ನ ಎಸ್.ಕೆ.ಮೊಬೈಲ್ಸ್​ ಅಂಗಡಿ ಬಳಿ ಫಾಜಿಲ್​ ಮಂಗಲಪೇಟೆ(23) ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಗಾಯಾಳು ಫಾಜಿಲ್​ರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಈ ಹಿನ್ನೆಲೆ ಮಂಗಳೂರು ನಗರ ವ್ಯಾಪ್ತಿಯ 4 ಪೊಲೀಸ್ ಠಾಣಾ ಸರಹದ್ದಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶನಿವಾರದವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಸುರತ್ಕಲ್ ಭಾಗ ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಸುರತ್ಕಲ್, ಬಜಪೆ, ಮೂಲ್ಕಿ, ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು.30ರ ಬೆಳಿಗ್ಗೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಗತ್ಯವಿದ್ದಲ್ಲಿ ಉಳಿದ ಪ್ರದೇಶಗಳಿಗೂ ಜಾರಿಗೊಳಿಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಸದ್ಯ ಸ್ಥಳಕ್ಕೆ ಸುರತ್ಕಲ್ ಠಾಣೆಯ ಪೊಲೀಸರು ಹಾಗೂ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸುರತ್ಕಲ್‌ನಲ್ಲಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಮಂಗಳೂರಿನ ಸುರತ್ಕಲ್‌ಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ರವಾನಿಸಲಾಗಿದೆ. ಮೂವರು ದುಷ್ಕರ್ಮಿಗಳು ಅಟ್ಟಾಡಿಸಿ ಫಾಜಿಲ್ ಮೇಲೆ ಹಲ್ಲೆಗೈದಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ಫಾಜಿಲ್​ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ರೂ ಫಾಜಿಲ್​ ಸುರತ್ಕಲ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು