Categories: ಮಂಗಳೂರು

ಸುರತ್ಕಲ್: ನಾನು ಕೋಮುವಾದಿಯಲ್ಲ, ನನಗೆ ರಾಷ್ಟ್ರಭಕ್ತರ ವೋಟ್ ಮಾತ್ರ ಸಾಕು – ಡಾ. ಭರತ್ ಶೆಟ್ಟಿ

ಸುರತ್ಕಲ್: “ನಾನು ಕೋಮುವಾದಿಯಲ್ಲ, ನಾನು ಯಾರನ್ನೂ ದ್ವೇಷಿಸುವುದಿಲ್ಲ. ನನಗೆ ಎಲ್ಲಾ ಧರ್ಮವೂ ಒಂದೇ, ನನಗೆ ರಾಷ್ಟ್ರಭಕ್ತರ ವೋಟ್ ಸಿಕ್ಕಿದ್ರೆ ಸಾಕು, ರಾಷ್ಟ್ರಭಕ್ತರ ವೋಟ್ ನಾನು ಕೇಳುತ್ತೇನೆ. ಹಿಂದೆ ಕೃಷ್ಣಾಪುರದ ಯುವಕ ಗೋಸಾಗಾಟ ಮಾಡುತ್ತಿದ್ದಾಗ ಪೊಲೀಸ್ ಗುಂಡೇಟಿಗೆ ಬಲಿಯಾದಾಗ ಆತನ ಕುಟುಂಬಕ್ಕೆ 15 ಲಕ್ಷ ಹಣವನ್ನು ಸರಕಾರದಿಂದ ಕೊಡಿಸಿದ್ದ ಮಾಜಿ ಶಾಸಕರು ಈಗ ಹಿಂದೂಗಳ ಮನೆಗೆ ಹೋಗಿ ಕಣ್ಣೀರು ಒರೆಸುವ ನಾಟಕವಾಡುತ್ತಿದ್ದಾರೆ. ಗೋಹತ್ಯೆ, ಲವ್ ಜಿಹಾದ್ ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ಅಭಿವೃದ್ಧಿಯ ಜೊತೆಗೆ ಪಕ್ಷದ ತತ್ವ ಸಿದ್ಧಾಂತವನ್ನು ಬಿಡುವ ಮಾತಿಲ್ಲ. 245 ಬೂತ್ ಗೆ ತಲಾ 8 ಲಕ್ಷ ರೂ. ನಂತೆ ಅನುದಾನ ಹಂಚಿದ್ದೇನೆ. ಹೀಗೆ ಒಟ್ಟಾರೆ 2000 ಕೋಟಿ ರೂ. ಅನುದಾನ ತಂದು ಕೆಲಸಕಾರ್ಯಗಳನ್ನು ಸಮರ್ಪಕವಾಗಿ ನಡೆಯುವಂತೆ ನೋಡಿಕೊಂಡಿದ್ದೇನೆ. ” ಎಂದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಪೂರ್ವ 2ನೇ ವಾರ್ಡ್ ಅಭಿವೃದ್ಧಿಗೆ 3.47 ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಇಲ್ಲಿನ ಮುಕ್ಕ ಸತ್ಯಧರ್ಮ ದೇವಿ ದೇವಸ್ಥಾನ ವಠಾರದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವೈ. ಅವರು ಚಾಲನೆ ನೀಡಿದರು.

ಪ್ರಾಸ್ತಾವಿಕ ಮಾತನ್ನಾಡಿದ ಮನಪಾ ಸದಸ್ಯೆ ಶ್ವೇತಾ ಪೂಜಾರಿ ಅವರು, “ಅಭಿವೃದ್ಧಿ ಕಾಮಗಾರಿ ಹಿಂದೆ ಒಂದು ಸಮುದಾಯದ ಜನರಿಗೆ ಅವರ ಓಣಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಭರತ್ ಶೆಟ್ಟಿ ಅವರು ಶಾಸಕರಾದ ಬಳಿಕ ಸಮಾಜದ ಪ್ರತಿಯೊಂದು ಓಣಿ, ರಸ್ತೆ, ಪಾರ್ಕ್ ಹೀಗೆ ಮೂಲೆ ಮೂಲೆಯಲ್ಲೂ ಅಭಿವೃದ್ಧಿಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೋ ಕುಳಿತು ಅಭಿವೃದ್ಧಿ ಎಲ್ಲಿ ಆಗುತ್ತಿದೆ ಎಂದು ಪ್ರಶ್ನೆ ಮಾಡುವವರು ಒಮ್ಮೆ ನಮ್ಮ ಬೂತ್ ಮಟ್ಟದ ನಾಯಕರು, ಕಾರ್ಪೋರೇಟರ್ ಗಳನ್ನು ಸಂಪರ್ಕಿಸಿ ಲೆಕ್ಕ ಕೇಳಿ” ಎಂದರು.

ವೇದಿಕೆಯಲ್ಲಿ ಸತ್ಯಧರ್ಮ ದೇವಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಣೇಶ್ ಐತಾಳ್, ದೇವೇಂದ್ರ ಪೂಜಾರಿ, ಶೋಭಾ ರಾಜೇಶ್, ಉತ್ತರ ಮಂಡಲ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಮೂರ್ತಿ ಸುರತ್ಕಲ್, ಮುಡಾ ಅಧ್ಯಕ್ಷೆ ಕವಿತಾ ಪೈ ಉಪಸ್ಥಿತರಿದ್ದರು. ಪುಷ್ಪರಾಜ್ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು.

ಥ್ರೆಟ್ ಕಾಲ್ ಬರುತ್ತೆ ಭಯಪಡಲ್ಲ

“ಸಮಾಜದ ಹಿತಕ್ಕಾಗಿ ಶ್ರಮಿಸುವಾಗ ಒಂದಷ್ಟು ಜನರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಥ್ರೆಟ್ ಕಾಲ್ ಬರೋದು ಸಾಮಾನ್ಯ. ರಾತ್ರಿ 5 ನಂಬರ್ ನಿಂದ ಕಾಲ್ ಬರುತ್ತೆ ಏನೇನೋ ಬೆದರಿಕೆ ಹಾಕ್ತಾರೆ. ಅದನ್ನೆಲ್ಲ ಕೇಳ್ಕೊಂಡು ಭಯ ಪಟ್ಕೊಂಡು ಮನೇಲಿ ಇರೋಕ್ಕಾಗುತ್ತಾ? ಹಿಂದುತ್ವ ಮತ್ತು ಅಭಿವೃದ್ಧಿ ಈ ಎರಡು ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುತ್ವದಿಂದಲೇ ಗೆದ್ದಿರುವ ಕಾರಣ ಇದಕ್ಕಾಗಿ ಭಯಪಡುವ ಜಾಯಮಾನ ನನ್ನದಲ್ಲ” ಎಂದು ಭರತ್ ಶೆಟ್ಟಿ ಹೇಳಿದರು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago