ಸುರತ್ಕಲ್: ಹೆಸರಾಂತ ವಿಹಾರ ತಾಣ ತಣ್ಣೀರುಬಾವಿ ಬೀಚ್ ನಿಂದ ಅನತಿ ದೂರದಲ್ಲಿರುವ ನಾಯರ್ ಕುದ್ರು ಮೂಲ ಸೌಕರ್ಯವಿಲ್ಲದೆ ಕಳೆದ 3 ದಶಕಗಳಿಂದ ಕುಗ್ರಾಮದಂತಿತ್ತು. ಮೀನುಗಾರಿಕೆಯನ್ನೇ ಅವಲಂಬಿಸಿರುವ ಗ್ರಾಮಸ್ಥರು ದ್ವೀಪದಂತಿದ್ದ ನಾಯರ್ ಕುದ್ರು ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಿಂದ ಪಟ್ಟ ಶ್ರಮಕ್ಕೆ ಕೊನೆಗೂ ಸಾರ್ಥಕತೆ ಸಿಕ್ಕಿದೆ. ಸೇತುವೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗಾಗಿ 3.5 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಪ್ರಾರಂಭಿಸಲು ಶುಕ್ರವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಭೂಮಿಪೂಜೆ ನೆರವೇರಿಸಿದ್ದು ಈ ವೇಳೆ ಗ್ರಾಮಸ್ಥರು ಶಾಸಕರನ್ನು ಅಭಿನಂದಿಸಿದರು.
ಬೂತ್ ಅಧ್ಯಕ್ಷ ಸುಜಿತ್, ಸ್ಥಳೀಯ ಕಾರ್ಪೋರೇಟರ್ ಗಳಾದ ಸುನೀತಾ, ನಾಗರಾಜ್, ಉಷಾ, ನಾಗವೇಣಿ, ರೇವತಿ, ಭಾರತಿ ಮತ್ತಿತರರು ಉಪಸ್ಥಿತರಿದ್ದರು.
ಸೇತುವೆ ನಿರ್ಮಾಣವಾಗದೆ ಸಮಸ್ಯೆಯಾಗಿತ್ತು
ಈ ವೇಳೆ ಮಾಧ್ಯಮಗಳ ಜೊತೆ ಮಾತಾಡಿದ ಸ್ಥಳೀಯರಾದ ನಾಗರಾಜ್, ಭಾರತಿ ಸುವರ್ಣ ಅವರು, “ನಾಯರ್ ಕುದ್ರು ಮಂಗಳೂರು ಪಟ್ಟಣಕ್ಕೆ ಸಮೀಪದಲ್ಲಿದ್ದರೂ ಇಲ್ಲಿ ಸೇತುವೆಯಿಲ್ಲದೆ ನಾವೆಲ್ಲರೂ ದ್ವೀಪದ ನಿವಾಸಿಗಳಂತೆ ಜೀವನ ಸಾಗಿಸುತ್ತಿದ್ದೆವು. ಕಳೆದ 30 ವರ್ಷಗಳಿಂದ ಇದಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದ್ದು ಇಲ್ಲಿಯವರೆಗೆ ನ್ಯಾಯ ಸಿಕ್ಕಿರಲಿಲ್ಲ. ಈ ಬಾರಿ ಶಾಸಕ ಭರತ್ ಶೆಟ್ಟಿ ಅವರು ಮುತುವರ್ಜಿ ವಹಿಸಿ ನಮ್ಮ ಬಹುಕಾಲದ ಬೇಡಿಕೆಗೆ ಮನ್ನಣೆ ನೀಡಿದ್ದಾರೆ. ಅವರಿಗೆ ದೇವರ ಆಶೀರ್ವಾದ ಸದಾ ಇರಲಿ” ಎಂದರು.
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…