ಮಂಗಳೂರು

ಸುರತ್ಕಲ್:  “ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್”ಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಚಾಲನೆ

ಸುರತ್ಕಲ್: ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಇಲ್ಲಿನ ಗೋವಿಂದ ದಾಸ್ ಕಾಲೇಜ್ ಮುಂಭಾಗ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.

ಈ ವೇಳೆ ಮಾತಾಡಿದ ಶಾಸಕರು, “ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್” ಯೋಜನೆಯಡಿಯಲ್ಲಿ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮುಂಭಾಗ ರಾಜ್ಯದಲ್ಲೇ ಪ್ರಥಮವಾಗಿ ಸರ್ವ ರೀತಿಯಲ್ಲೂ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿದೆ.

ಶುದ್ಧ ಕುಡಿಯುವ ನೀರು, ಸಿಸಿ ಕೆಮರಾ ವ್ಯವಸ್ಥೆ ಸೇರಿದಂತೆ, ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ನೇರವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೊಬೈಲ್ ಗೆ ಸಂಪರ್ಕ ಕಲ್ಪಿಸುವಂತೆ ಎಮರ್ಜನ್ಸಿ ಕರೆ ವ್ಯವಸ್ಥೆಯನ್ನೂ ಮಾಡಲಾಗಿದೆ” ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು. “ಯೋಜನೆಯ ಮುಂದುವರಿದ ಭಾಗವಾಗಿ ಸುರತ್ಕಲ್ ಬೀಚ್ ನಲ್ಲಿ ಪ್ರವಾಸಿಗರ ವಿಹಾರಕ್ಕೆ ಪಾರ್ಕ್, ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜನರು ಇವುಗಳನ್ನು ಯೋಗ್ಯ ರೀತಿಯಲ್ಲಿ ಬಳಸುವ ಮೂಲಕ ಸ್ವಚ್ಛತೆಯ ಕಡೆಗೆ ಗಮನ ನೀಡುವಂತಾಗಬೇಕು” ಎಂದರು.

ಮಂಗಳೂರು ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಎಸಿಪಿ ಎಸ್. ಮಹೇಶ್ ಕುಮಾರ್, ಸರ್ಕಲ್ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, ಗೋವಿಂದ ದಾಸ್ ಕಾಲೇಜ್ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ, ಕಾರ್ಪೋರೇಟರ್ ವರುಣ್ ಚೌಟ, ಶ್ವೇತಾ ಪೂಜಾರಿ, ಶೋಭಾ ರಾಜೇಶ್, ಲೋಕೇಶ್ ಬೊಳ್ಳಾಜೆ, ನಯನ ಆರ್. ಕೋಟ್ಯಾನ್, ಸಂಗೀತಾ ನಾಯಕ್, ಸರಿತಾ ಶಶಿಧರ್, ಮಂಗಳೂರು ಉತ್ತರ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಸಸಿಹಿತ್ಲು ಮತ್ತಿತರರು ಉಪಸ್ಥಿತರಿದ್ದರು.

Sneha Gowda

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

4 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

12 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

29 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

30 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

41 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

42 mins ago