ಬಂಟ್ವಾಳ: ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳು ಗ್ರಾಮದ ಫಲಾನುಭವಿಗಳಿಗೆ ನೇರವಾಗಿ ಸಿಗುವ ಸುಲಭವಾದ ವ್ಯವಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕಲ್ಪಿಸಿದ್ದಾರೆ. ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಬುಧವಾರ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನೀರಿನ ಟ್ಯಾಂಕ್, ಕಲಿಕಾ ಪ್ರೋತ್ಸಾಹ ಧನ ಹಾಗೂ ವಿವಿಧ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದರು.
ಶಿಕ್ಷಣ ಮತ್ತು ಆರೋಗ್ಯದ ಸೌಲಭ್ಯಗಳು ಸರಕಾರದಿಂದ ಉಚಿತವಾಗಿ ಸಿಕ್ಕಾಗ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬ ನಿಟ್ಟಿನಲ್ಲಿ ಸರಕಾರ ಸೌಲಭ್ಯಗಳನ್ನು ನೀಡಿದೆ ಎಂದರು.
ಅಮ್ಟಾಡಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 10 ಕೋಟಿ ರೂಪಾಯಿ ಅನುದಾನವನ್ನು ಬಳಕೆ ಮಾಡಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದು ಶಾಕರು ತಿಳಿಸಿದರು. ಗ್ರಾಮಗಳಲ್ಲಿ ನೀರಿನ ಇಂಗುವಿಕೆಯ ಮೂಲಕ ಕೃಷಿಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂಬ ನಿಟ್ಟಿನಲ್ಲಿ ಸಣ್ಣ ಸಣ್ಣ ತೋಡುಗಳಿಗೆ ಚೆಕ್ ಡ್ಯಾಂ ಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರತಿಯೊಂದು ಮನೆಗೆ ಶುಧ್ದವಾದ ಕುಡಿಯುವ ನೀರು ಪೂರೈಕೆ ಪ್ರಧಾನಿಯವರ ಆಶಯದಂತೆ ಜೆಜೆಎಂ ಮೂಲಕ ನಳ್ಳಿ ನೀರು ಪೂರೈಕೆಯ ಯೋಜನೆ ಜಾರಿ ಮಾಡಲಾಗಿದೆ.ಸರಕಾರ ಪ್ರತಿಯೊಂದು ಯೋಜನೆ ಜನರಿಗೆ ತಲುಪಿಸುವ ಕೆಲಸ ಮಾಡಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.
ಗ್ರಾಮಪಂಚಾಯತ್ ಅಧ್ಯಕ್ಷೆ ಮೋಹಿನಿ,ಉಪಾಧ್ಯಕ್ಷ ಸುನಿಲ್ , ಸದಸ್ಯರಾದ ಹರೀಶ್ ಶೆಟ್ಟಿ ಪಡು, ವಿಜಯ್, ಯಶವಂತ ಶೆಟ್ಟಿ, ಪೂರ್ಣಿಮಾ, ವಿಶ್ವನಾಥ ಕಲಾಯಿ, ಭಾರತಿ ಚೌಟ , ಫೆಲಿಕ್ಸಡಿ.ಸೋಜ, ಯಶೋಧರೆ,ಚಂದ್ರಾವತಿ, ಸೌಮ್ಯ ಪಿ.ಡಿ.ಒ.ರವಿ , ಕಾರ್ಯದರ್ಶಿ ಲಕ್ಮೀನಾರಾಯಣ ಉಪಸ್ಥಿತರಿದ್ದರು. ಲೋಕೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.