News Karnataka Kannada
Tuesday, April 30 2024
ಮಂಗಳೂರು

ಪ್ರತಿಭಾವಂತ ಕಬಡ್ಡಿ ಆಟಗಾರ ಅಡಕೆ ಮರದಿಂದ ಬಿದ್ದು ಸಾವು

Talented kabaddi player dies after falling from arecanut tree
Photo Credit : News Kannada

ಸುಳ್ಯ: ಸುಳ್ಯದ ಉತ್ತಮ ಕಬಡ್ಡಿ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಉಮೇಶ್ ಅಲಿಯಾಸ್ ಕಾಶಿ (24 ವರ್ಷ) ಕಳೆದ ಎಂಟು ತಿಂಗಳ ಹಿಂದೆ ಕಾಣಿಯೂರಿನಲ್ಲಿ ಅಡಿಕೆ ಗಿಡಗಳಿಗೆ ಔಷಧಿ ಸಿಂಪಡಿಸುತ್ತಿರುವ ಸಂದರ್ಭ ಆಯತಪ್ಪಿ ಕೆಳಕ್ಕೆ ಬಿದ್ದಿದ್ದರು. ಇದಾದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೊಂಟಕ್ಕೆ ಬಲವಾಗಿ ಪೆಟ್ಟು ಬಿದ್ದುದರಿಂದ ಉಮೇಶ್ ಮಲಗಿದಲ್ಲೇ ಇದ್ದರು.

ಅಮರಮುಡ್ನೂರು ಗ್ರಾಮದ ಚಿಕ್ಕಿನಡ್ಕ ಕಾಲನಿ ನಿವಾಸಿ ಬಾಬು ಎಂಬವರ ಪುತ್ರ ಉಮೇಶ್ ಚಿಕ್ಕಿನಡ್ಕ ಸೊಂಟಕ್ಕೆ ಏಟಾಗಿ ಮಲಗಿದಲ್ಲೇ ಇದ್ದರು. ಇತ್ತೀಚೆಗೆ ಕಳೆದ ಒಂದು ವಾರದ ಹಿಂದೆ ಅನಾರೋಗ್ಯ ಉಲ್ಬಣಗೊಂಡಿದ್ದು ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ತಾಯಿ ಕಳೆದ ನವೆಂಬರ್ ನಲ್ಲಿ ಅಸೌಖ್ಯದಿಂದ ಮೃತಪಟ್ಟಿರುತ್ತಾರೆ. ಮೃತರು ತಂದೆ ಬಾಬು ಸಹೋದರ ನಾಗೇಶ್ ಚಿಕ್ಕಿನಡ್ಕ ಮತ್ತು ಬಂಧುಗಳನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು