News Karnataka Kannada
Saturday, May 04 2024
ಮಂಗಳೂರು

ತಲಪಾಡಿ: ಕೇರಳದಿಂದ ಸಾಗಾಟ ನಡೆಸುತ್ತಿದ್ದ ದಾಖಲೆ ರಹಿತ 7,95 ಲಕ್ಷ ರೂ.ವಶಕ್ಕೆ

Thalapady: Rs 70,95,000 unaccounted cash seized from Kerala
Photo Credit : News Kannada

ಉಳ್ಳಾಲ: ಕೇರಳದಿಂದ ದಾಖಲೆಗಳಿಲ್ಲದೆ ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು, ಕಾರಿನಲ್ಲೊದ್ದ   7,95,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರಲ್ಲಿದ್ದ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆಗೈಯ್ಯುತ್ತಿದ್ದಾಗ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ರಿಟೈನಿಂಗ್ ಅಧಿಕಾರಿಗಳಿಗೆ ನಗದು ಹಾಗೂ ಕಾರನ್ನು ವಿಚಾರಣೆಗೆ ನೀಡಲಾಗಿದೆ.

ಸುರೇಶ್ ಅವರು ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿಗಳ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು