News Karnataka Kannada
Tuesday, April 30 2024
ಮಂಗಳೂರು

ಪುತ್ತೂರು: ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

The body of a youth who went missing after swimming in a stream has been found.
Photo Credit : News Kannada

ಪುತ್ತೂರು: ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಅ.16ರಂದು ಬೆಳಿಗ್ಗೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಮೃತಪಟ್ಟವರು.

ಅ. 15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಯುವಕ ನಾಪತ್ತೆಯಾಗುತ್ತಿದ್ದಂತೆ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.

ತಕ್ಷಣ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ನಡೆಸಿದರಾದರೂ ಮೃತದೇಹ ಪತ್ತೆಯಾಗಿರಲಿಲ್ಲ. ಬಳಿಕ ಮುಳುಗು ತಜ್ಞರು ಕಾರ್ಯಾಚರಣೆ ಮುಂದುವರಿಸಿದ್ದರು. ಅದರೂ, ಮೃತದೇಹ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಆಸುಪಾಸಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು