ಬೆಳ್ತಂಗಡಿ: ಸಂಗೀತ ಮತ್ತು ಸ್ತುತಿ ಸೇವೆ ದೇವರಿಗೆ ಅತ್ಯಂತ ಪ್ರಿಯವಾಗಿದ್ದು ಸುಶ್ರಾವ್ಯವಾಗಿ ಇವುಗಳನ್ನು ಹಾಡಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು. ಭಕ್ತರಿಗೆ ತೃಪ್ತಿ ಆದರೆ ಭಗವಂತನಿಗೂ ತೃಪ್ತಿಯಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಸುರತ್ಕಲ್ನ ಮಣಿಕೃಷ್ಣ ಅಕಾಡೆಮಿ ಆಶ್ರಯದಲ್ಲಿ ಧರ್ಮಸ್ಥಳ ಕ್ಷೇತ್ರದ ಬಗ್ಯೆ ರಚಿಸಿ ಪ್ರಕಟಿಸಿದ “ಮಂಜುನಾದ” ಕೃತಿಗಳನ್ನು ಭಾನುವಾರ ಧರ್ಮಸ್ಥಳದಲ್ಲಿ ವಸಂತ ಮಹಲ್ನಲ್ಲಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಪುರಾಣವಾಚನ, ವೇದಘೋಷ, ಸಂಗೀತ ನೃತ್ಯ, ಸ್ತುತಿ ಮೊದಲಾದ ಸೇವೆಗಳಿಂದ ನಾವು ದೇವರನ್ನು ಸಾಕ್ಷಾತ್ಕರಿಸಿ ಆರಾಧನೆ ಮಾಡಬಹುದು ಖ್ಯಾತ ಸಂಗೀತ ಕಲಾವಿದರಾದ ಡಾ. ರಾಜ್ಕುಮಾರ್ ಭಾರತಿ ಅವರು ಗೌರವಯುತ ಸಾಹಿತ್ಯದ ಮೂಲಕ ಸುಶ್ರಾವ್ಯವಾದ ರಾಗ ಸಂಯೋಜನೆಯೊಂದಿಗೆ ಶ್ರೀ ಮಂಜುನಾಥ ಸ್ವಾಮಿ ಬಗ್ಯೆ ರಚಿಸಿದ ಶಾಸ್ತ್ರೀಯ ಗೀತೆಗಳು ಉತ್ತಮವಾಗಿ ಮೂಡಿ ಬಂದಿವೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಅಕಾಡೆಮಿಯ ಮುಂದಿನ ಕೃತಿಗಳ ಪ್ರಕಾಶನಕ್ಕೂ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕನ್ನಡದಲ್ಲೇ ರಚಿಸಿದ ಶಾಸ್ತ್ರೀಯ ಸಂಗೀತ ಕೃತಿಗಳು ಶ್ರೀ ಸ್ವಾಮಿಗೆ ಸಂದ ಅಪೂರ್ವ ಸೇವೆಯಾಗಿದೆ ಎಂದು ಹೇಳಿ ಸುಶ್ರಾವ್ಯವಾಗಿ ಶಾಸ್ತ್ರೀಯ ಸಂಗೀತ ಹಾಡಿದ ಎಲ್ಲಾ ಕಲಾವಿದರನ್ನು ಹೆಗ್ಗಡೆಯವರು ಅಭಿನಂದಿಸಿ ಗೌರವಿಸಿದರು.
ಈ ಬಗ್ಯೆ ವಿಶೇಷ ಶ್ರಮ ವಹಿಸಿದ ಅಕಾಡೆಮಿಯ ಕಾರ್ಯದರ್ಶಿ ನಿತ್ಯಾನಂದ ರಾವ್ ಅವರ ಸೇವೆ ಸ್ತುತ್ಯಾರ್ಹವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿಯ ಪ್ರೊ. ಅರವಿಂದ ಹೆಬ್ಬಾರ್ ಮತ್ತು ಡಾ. ರಾಜಕುಮಾರ್ ಭಾರತಿ ಶುಭಾಶಂಸನೆ ಮಾಡಿದರು.
ಅಧ್ಯಕ್ಷತೆ ವಹಿಸಿದ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಮಾತನಾಡಿ, ಪುಣ್ಯಕ್ಷೇತ್ರಗಳ ಬಗ್ಯೆ ಶಾಸ್ತ್ರೀಯ ಸಂಗೀತದ ಕೃತಿಗಳನ್ನು ಪ್ರಕಟಿಸುವುದು ಸ್ತುತ್ಯಾರ್ಹವಾಗಿದೆ. ಧರ್ಮಸ್ಥಳ ಕ್ಷೇತ್ರದಿಂದ ಶುಭಾರಂಭಗೊಂಡ ಈ ಕಾರ್ಯ ಯಶಸ್ವಿಯಾಗಲೆಂದು ಹಾರೈಸಿದರು. ಪ್ರೀತಿ-ವಿಶ್ವಾಸ ಹಾಗೂ ದೃಢ ಭಕ್ತಿಯಿಂದ ಶಾಸ್ತ್ರೀಯ ಸಂಗೀತ ಹಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವರ್ಧನೆಯೊಂದಿಗೆ ಶಾಂತಿ, ನೆಮ್ಮದಿ ಸಿಗುತ್ತದೆ.
ಸುಶ್ರಾವ್ಯ ಸಂಗೀತವನ್ನು ಎಲ್ಲರೂ ಇಲ್ಲಿ ಕೇಳಿ, ಆನಂದಿಸಿ ಅನುಭವಿಸಿದ್ದೇವೆ ಎಂದು ಅವರು ಸಂಗೀತ ಕಲಾವಿದರನ್ನು ಶ್ಲಾಘಿಸಿ ಅಭಿನಂದಿಸಿದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಗೀತ ಅಭ್ಯಾಸಕ್ಕೆ ಅವಕಾಶ ನೀಡಲಾಗಿದ್ದು. ಯುವ ಜನತೆ ಕೇವಲ ವಿದ್ಯಾವಂತರಾದರೆ ಸಾಲದು.ಪ್ರಜ್ಞಾವಂತರೂ ಆಗಬೇಕು ಎಂದು ಅವರು ಸಲಹೆ ನೀಡಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಹರಿಕೃಷ್ಣ ಪುನರೂರು ಉಪಸ್ಥಿತರಿದ್ದರು.
ಮಣಿಕೃಷ್ಣ ಅಕಾಡೆಮಿ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ವಾಗತಿಸಿದರು. ಕಾರ್ಕಳದ ಡಾ. ಎಸ್.ಆರ್. ಅರುಣಕುಮಾರ್ ಧನ್ಯವಾದವಿತ್ತರು. ಉಡುಪಿಯ ರಾಮಾಂಜನೇಯ ಮತ್ತು ಶ್ರೀನಿವಾಸರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…