News Karnataka Kannada
Thursday, May 02 2024
ಮಂಗಳೂರು

ಪುತ್ತೂರಿಗೆ ಬಂದ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯ ಆಮಂತ್ರಣ ಅಕ್ಷತೆ

The invitation of Shri Ram Janmabhoomi
Photo Credit : News Kannada

ಪುತ್ತೂರು: ಅಯೋಧ್ಯೆಯಲ್ಲಿ ಹಿಂದೂಗಳ ನೂರಾರು ವರ್ಷದ ಕನಸಾಗಿರುವ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಈ ಶುಭ ಸಮಾರಂಭದ ಆಮಂತ್ರಣವನ್ನು ದೇಶದ ಮೂಲೆ ಮೂಲೆಗೂ ಹಂಚುವ ಕಾರ್ಯವನ್ನು ಶ್ರೀ ರಾಮಜನ್ಮಭೂಮಿ ಟ್ರಸ್ಟ್‌ ನಡೆಸುತ್ತಿದೆ.

ಇದೀಗ ಪುತ್ತೂರಿಗೆ ಶ್ರೀರಾಮ ಜನ್ಮಭೂಮಿ ಉದ್ಘಾಟನೆ ಆಮಂತ್ರಣ ಪತ್ರಿಕೆ, ಅಕ್ಷತೆ ತಲುಪಿದೆ. ಪುತ್ತೂರು ಮಹಾಲಿಂಗೇಶ್ವರ ದೇವಳಕ್ಕೆ ತಲುಪಿದ ಅಕ್ಷತೆಯನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಆಡಳಿತ ಮಂಡಳಿ ಸದಸ್ಯರು ಬರಮಾಡಿಕೊಂಡರು. ನಂತರ ದೇವಸ್ಥಾನದ ಗರ್ಭಗುಡಿಯಲ್ಲಿ ಇರಿಸಿ ಅಕ್ಷತೆಗೆ ಪೂಜೆ ಸಲ್ಲಿಸಲಾಯಿತು.

ನವಂಬರ್ 30 ರ ತನಕ ದೇವಸ್ಥಾನದ ಗರ್ಭಗುಡಿಯಲ್ಲಿ ಅಕ್ಷತೆಯನ್ನು ಇರಿಸಲಾಗುವುದು. ನ.30 ರಂದು ರಾಮಜನ್ಮ ಭೂಮಿ ಕ್ಷೇತ್ರ ಟ್ರಸ್ಟ್ ಸಮಿತಿಯ ತಾಲೂಕು ಘಟಕದ ಸಭೆ ನಡೆಯಲಿದ್ದು, ಸಭೆಯಲ್ಲಿ ತಾಲೂಕು ಘಟಕ ಮತ್ತು ಗ್ರಾಮ ಘಟಕಗಳಿಗೆ ಅಕ್ಷತೆಯ ಹಸ್ತಾಂತರ ಮಾಡಲಾಗುವುದು. ಜ.1 ರ ತನಕ ಆಯಾಯ ಗ್ರಾಮದ ದೈವ ಮತ್ತು ದೇವಸ್ಥಾನದಲ್ಲಿ ಅಕ್ಷತೆ ಇರಿಸಲಾಗುವುದು. ಜ.1 ರಿಂದ 15 ರಿಂದ ಪ್ರತೀ ಹಿಂದೂ ಮನೆಗಳಿಗೆ ಅಕ್ಷತೆ ಹಂಚಿಕೆ ಮಾಡಲಾಗುವುದು ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು