ಪುತ್ತೂರು: ಅಯೋಧ್ಯೆಯಲ್ಲಿ ಹಿಂದೂಗಳ ನೂರಾರು ವರ್ಷದ ಕನಸಾಗಿರುವ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಈ ಶುಭ ಸಮಾರಂಭದ ಆಮಂತ್ರಣವನ್ನು ದೇಶದ ಮೂಲೆ ಮೂಲೆಗೂ ಹಂಚುವ ಕಾರ್ಯವನ್ನು ಶ್ರೀ ರಾಮಜನ್ಮಭೂಮಿ ಟ್ರಸ್ಟ್ ನಡೆಸುತ್ತಿದೆ.
ಇದೀಗ ಪುತ್ತೂರಿಗೆ ಶ್ರೀರಾಮ ಜನ್ಮಭೂಮಿ ಉದ್ಘಾಟನೆ ಆಮಂತ್ರಣ ಪತ್ರಿಕೆ, ಅಕ್ಷತೆ ತಲುಪಿದೆ. ಪುತ್ತೂರು ಮಹಾಲಿಂಗೇಶ್ವರ ದೇವಳಕ್ಕೆ ತಲುಪಿದ ಅಕ್ಷತೆಯನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಆಡಳಿತ ಮಂಡಳಿ ಸದಸ್ಯರು ಬರಮಾಡಿಕೊಂಡರು. ನಂತರ ದೇವಸ್ಥಾನದ ಗರ್ಭಗುಡಿಯಲ್ಲಿ ಇರಿಸಿ ಅಕ್ಷತೆಗೆ ಪೂಜೆ ಸಲ್ಲಿಸಲಾಯಿತು.
ನವಂಬರ್ 30 ರ ತನಕ ದೇವಸ್ಥಾನದ ಗರ್ಭಗುಡಿಯಲ್ಲಿ ಅಕ್ಷತೆಯನ್ನು ಇರಿಸಲಾಗುವುದು. ನ.30 ರಂದು ರಾಮಜನ್ಮ ಭೂಮಿ ಕ್ಷೇತ್ರ ಟ್ರಸ್ಟ್ ಸಮಿತಿಯ ತಾಲೂಕು ಘಟಕದ ಸಭೆ ನಡೆಯಲಿದ್ದು, ಸಭೆಯಲ್ಲಿ ತಾಲೂಕು ಘಟಕ ಮತ್ತು ಗ್ರಾಮ ಘಟಕಗಳಿಗೆ ಅಕ್ಷತೆಯ ಹಸ್ತಾಂತರ ಮಾಡಲಾಗುವುದು. ಜ.1 ರ ತನಕ ಆಯಾಯ ಗ್ರಾಮದ ದೈವ ಮತ್ತು ದೇವಸ್ಥಾನದಲ್ಲಿ ಅಕ್ಷತೆ ಇರಿಸಲಾಗುವುದು. ಜ.1 ರಿಂದ 15 ರಿಂದ ಪ್ರತೀ ಹಿಂದೂ ಮನೆಗಳಿಗೆ ಅಕ್ಷತೆ ಹಂಚಿಕೆ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…