ಮಂಗಳೂರು: ಹೆಚ್ಚುತ್ತಿರುವ ತಾಪಮಾನ. ಇದರಿಂದಾಗಿ ಕುಡಿಯುವ ನೀರಿಗೂ ಹಾಹಾಕಾರ ಇದಕ್ಕೆ ಮೂಲ ಕಾರಣ ಅರಣ್ಯ ನಾಶ. ಮಂಗಳೂರಿನಲ್ಲೂ ಬಿಸಿಲ ಝಳ ಏರುತ್ತಿದೆ. ಮರಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ಹಾಗಾದರೆ ಮಂಗಳೂರಿನಲ್ಲಿ ಎಷ್ಟು ಪ್ರಮಾಣದ ಅರಣ್ಯವಿದೆ ಗೊತ್ತಾ ? ಅದರ ಅಂಕಿಅಂಶ ಇಲ್ಲಿದೆ ನೋಡಿ.
ನಿಟ್ಟೆ ವಿವಿ ನುಕ್ಸರ್ ರಿಸರ್ಚ್ ಸೆಂಟರ್ ಡೆಪ್ಯುಟಿ ಡೈರೆಕ್ಟರ್ ಡಾ. ಸ್ಮಿತಾ ಹೆಗ್ಡೆಯವರ ನೇತೃತ್ವದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳ ಸಹಕಾರದಿಂದ ‘ಟ್ರೀ ಕೌಂಟ್ ಮಂಗಳೂರು’ ಎಂಬ ಅಧ್ಯಯನ ನಡೆಸಿ,ನಗರದಲ್ಲಿ ಮರಗಳೆಷ್ಟಿವೆ ಎಂಬ ಲೆಕ್ಕಚಾರ ಮಾಡಲಾಯಿತು.
ಮಂಗಳೂರು ಮನಪಾ ವ್ಯಾಪ್ತಿಯ ಒಟ್ಟು 60 ವಾರ್ಡ್ ಗಳ 50 ವಾರ್ಡ್ ಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 6.24% ಮರಗಳಿವೆ. ಖಾಸಗಿ ಪ್ರದೇಶಗಳಲ್ಲಿ ಒಟ್ಟು 41.09ಶೇ. ಮರಗಳಿವೆ. ನಗರದ ದೇರೆಬೈಲ್, ಡೊಂಗರಕೇರಿ, ಕದ್ರಿ ಕಂಬಳ ವಾರ್ಡ್ ನಲ್ಲಿ ಮರಗಳ ಸಂಖ್ಯೆ ತೀರಾ ಕಡಿಯಾಗಿದ್ದು, ಇಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ 3 ಶೇ. ತಾಪಮಾನ ಏರಿಕೆಯಾಗಿದೆ. ತಿರುವೈಲ್, ಬಜಾಲ್ ವ್ಯಾಪ್ತಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾಣದೆ ಸರ್ವೆ ಪ್ರಕಾರ ಇಲ್ಲಿ ತಾಪಮಾನ ಕಡಿಮೆಯಿದೆ.
ಮರಗಳಗಳ ರಕ್ಷಣೆಗೆ ಬಹಳಷ್ಟು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ನಾಶ ಮಾಡುವ ಕೆಲಸ ಕೂಡ ಭರದಿಂದ ಸಾಗುತ್ತಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಪರಿಸರ ಪ್ರೇಮಿಗಳು ಮರಗಳ ಉಳಿವಿಗೆ ಹರಸಾಹಸ ಪಡುತ್ತಿದ್ದಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದ್ಯಾವುದೂ ಲೆಕ್ಕಕ್ಕೆ ಬಂದಂತೆ ಕಾಣುತ್ತಿಲ್ಲ. ಹೀಗಾಗಿ ಮಂಗಳೂರಿನ ಜನರು ಇಂದಿನಿಂದಲೇ ಎಚ್ಚೆತ್ತುಕೊಂಡು ಮರಗಳ ಸಂರಕ್ಷಣೆಗೆ ಮುಂದಾಗಬೇಕಿದೆ.
ಇದೆ ರೀತಿ ಮುಂದುವರಿದರೆ ಮುಂದೊಂದು ದಿನ ಭಯಂಕರವಾದ ಬಿಸಿಲು ಹಾಗು ನೀರಿನ ಅಭಾವದಿಂದಾಗಿ ಮನುಷ್ಯ ಜಾತಿ ಹಾಗೂ ಪ್ರಾಣಿ ಸಂಕುಲಗಳು ಬಳಲುವುದಂತೂ ಖಂಡಿತ.
ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಶ್ರೀ ಮಲೆ ಮಹದೇಶ್ವರನಿಗೆ ಬೆಂಗಳೂರಿನ ನಾಗಮಣಿ.ಎಂ ಮತ್ತು ಕುಟುಂಬ 01 ಕೆಜಿ…
ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಈ ಭಯಾನಕ ಘಟನೆ…
ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…
ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ ಕಾಲಿಗೆ…