News Karnataka Kannada
Monday, May 06 2024
ಮಂಗಳೂರು

ಅಂಗನವಾಡಿಯಲ್ಲಿ ವೇತನವಿಲ್ಲದೇ ಸೇವೆ: ಹೈಕೋರ್ಟ್‌ ಮಾನವೀಯ ತೀರ್ಪು

The state high court has given a verdict on humanity
Photo Credit : News Kannada

ಬಂಟ್ವಾಳ: ತಪ್ಪೆಸಗಿದ ಬಡಕುಟುಂಬದ ವ್ಯಕ್ತಿಯ ಮನೆಯ ಹಿನ್ನೆಲೆಯನ್ನು ಅರಿತುಕೊಂಡು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪೊಂದು ಉಚ್ಛನ್ಯಾಯಾಲಯದ ಮಾನವೀಯತೆಯನ್ನು ಎತ್ತಿ ಹಿಡಿದಿದೆ.

ಹೌದು.. ಈ ವಿದ್ಯಮಾನ ನಡೆದಿರುವುದು ಬಂಟ್ವಾಳದಲ್ಲಿ.. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿ 81 ವರ್ಷದ ಐತಪ್ಪ ನಾಯ್ಕ ಅವರದ್ದು ತೀರಾ ಬಡ ಕುಟುಂಬ. 2008ರಲ್ಲಿ ಜಾಗದ ವಿಚಾರದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ನಡೆಸಿದ್ದರು. ಸದ್ರಿ ಪ್ರಕರಣದಲ್ಲಿ ಬಂಟ್ವಾಳ ನ್ಯಾಯಾಲಯ, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ದಂಡ ವಿಧಿಸಿತ್ತು. ಆದರೆ ದೂರುದಾರ ವ್ಯಕ್ತಿ ಆರೋಪಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕೆಂದು ಮಂಗಳೂರಿನ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 2014ರಲ್ಲಿ ಆರೋಪಿ ಐತಪ್ಪ ನಾಯ್ಕನಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ಕೊಟ್ಟಿತ್ತು.

ಮಂಗಳೂರಿನ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಐತಪ್ಪ ನಾಯ್ಕ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಮಕ್ಕಳಿಲ್ಲದ ವೃದ್ಧ ಮತ್ತು ಮನೆಯಲ್ಲಿ ಪತ್ನಿ ಒಬ್ಬಂಟಿಯಾಗಿರುವುದರಿಂದ ವಯಸ್ಸನ್ನು ನೋಡಿ ಶಿಕ್ಷೆಗೆ ವಿನಾಯ್ತಿ ನೀಡಬೇಕೆಂದು ವಕೀಲರು ಕೋರಿದ್ದರು. ಆರೋಪಿ ಐತಪ್ಪ ನಾಯ್ಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಲ್ಲದೆ, ಪಶ್ಚಾತ್ತಾಪ ವ್ಯಕ್ತಪಡಿಸಿದ್ದರಿಂದ ನ್ಯಾಯಾಧೀಶರು ಕೆಳಗಿನ ಕೋರ್ಟಿನ ಶಿಕ್ಷೆಯನ್ನು ರದ್ದುಗೊಳಿಸಿದ್ದಾರೆ. ಅದರ ಬದಲಿಗೆ ಒಂದು ವರ್ಷ ಕಾಲ ಸ್ಥಳೀಯ ಅಂಗನವಾಡಿಯಲ್ಲಿ ವೇತನ ಇಲ್ಲದೆ ಸೇವೆ ಮಾಡುವಂತೆ ಆದೇಶ ಮಾಡಿದ್ದಾರೆ. ಅದರಂತೆ, ಕರೋಪಾಡಿ ಗ್ರಾಮದ ಅಂಗನವಾಡಿಯಲ್ಲಿ ವೃದ್ಧ ಐತಪ್ಪ ನಾಯ್ಕ ಈಗ ಶುಚಿತ್ವದ ಕೆಲಸ ಆರಂಭಿಸಿದ್ದಾರೆ.

ಐತಪ್ಪ ನಾಯ್ಕರಿಗೆ ಬಂಟ್ವಾಳದ ವಕೀಲರೊಬ್ಬರು ಸಹಾಯ ಹಸ್ತ ನೀಡಿದ್ದು, ಹೈಕೋರ್ಟಿನಲ್ಲಿ ವಾದಿಸಿ ನ್ಯಾಯ ದೊರಕಿಸಿದ್ದಾರೆ. ಇಳಿ ವಯಸ್ಸಿನಲ್ಲಿ ಜೈಲು ಸೇರುವ ಬದಲು ಮನೆ ಬಳಿಯಲ್ಲೇ ಅಂಗನವಾಡಿ ಸೇವೆಗೆ ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಫೆ.20 ರಿಂದ ಪ್ರತಿದಿನ ಅಂಗನವಾಡಿ ಶುಚಿಗೊಳಿಸುವುದು, ಗಿಡಗಳಿಗೆ ನೀರು ಹಾಕುವ ಕಾರ್ಯವನ್ನು ಐತ್ತಪ್ಪ ನಾಯ್ಕರು ಮಾಡುತ್ತಿದ್ದಾರೆ.

ದುಡುಕುತನದ ನಡವಳಿಕೆಗಳು ಒಮ್ಮೊಮ್ಮೆ ತಪ್ಪೆಸಗಿದ ವ್ಯಕ್ತಿಗೆ ಮಾತ್ರವಲ್ಲ, ಇಡೀ ಕುಟುಂಬಕ್ಕೆ ಸಮಸ್ಯೆಯಾಗಿಬಿಡುತ್ತದೆ. ಸದ್ರಿ ಪ್ರಕರಣದಲ್ಲಿ ಐತ್ತಪ್ಪ ನಾಯ್ಕರ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ತೀರ್ಪು ಮಾನವೀಯ ಸಂದೇಶವನ್ನೂ ಎತ್ತಿಹಿಡಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು