News Karnataka Kannada
Tuesday, April 30 2024
ಮಂಗಳೂರು

“ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವಿಲ್ಲ” -ಶಾಸಕ ವೈ. ಭರತ್ ಶೆಟ್ಟಿ

"There is no politics on the issue of development." Bharath Shetty
Photo Credit : News Kannada

ಸುರತ್ಕಲ್: “ಪಕ್ಷಾತೀತ ನೆಲೆಯಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಇದರಲ್ಲಿ ಯಾವುದೇ ರೀತಿಯ ರಾಜಕೀಯ ದುರುದ್ದೇಶವಿಲ್ಲ” ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಹೇಳಿದರು.

ಅವರು ಮಂಗಳೂರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್‌ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 6ನೇ ವಿಭಾಗದ ರಸ್ತೆ ಅಭಿವೃದ್ಧಿಗೆ 30ಲಕ್ಷ, ಕೃಷ್ಣ ಮಠ ರಸ್ತೆ ಸಮಗ್ರ ಅಭಿವೃದ್ಧಿಗೆ 19ಲಕ್ಷ, 6ನೇ ವಿಭಾಗದ ಮುಂದುವರಿದ ಕಾಮಗಾರಿಗೆ 19ಲಕ್ಷ, ಮತ್ತು ಲೋಕೋಪಯೋಗಿ ಇಲಾಖೆಯಿಂದ ಮಂಜೂರಾತಿಗೊಂಡ ರಸ್ತೆ ಕಾಂಕ್ರಿಟೀಕರಣಕ್ಕೆ ಮತ್ತು ಚರಂಡಿ ರಚನೆಗೆ 80ಲಕ್ಷ ಒಟ್ಟು ಸೇರಿ ಸುಮಾರು 1ಕೋಟಿ 48 ಲಕ್ಷ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ ಗೆ ಗುದ್ದಲಿಪೂಜೆ‌ ನೆರವೇರಿಸಿ ಮಾತನಾಡಿದರು. ಬಾಕಿಯುಳಿದ ಕೃಷ್ಣಾಪುರ ಮಾರುಕಟ್ಟೆ ಯೋಜನೆಗೆ ಈಗಾಗಲೇ ಅನುದಾನ ಇರಿಸಿ ಕಾಮಗಾರಿ ಪ್ರಾರಂಭಗೊಂಡಿದೆ ಎಂದರು.

ಅನುದಾನ ಒದಗಿಸಿದ ನೆಲೆಯಲ್ಲಿ ಶಾಸಕರನ್ನು‌ ಗ್ರಾಮಸ್ಥರ‌ ನೆಲೆಯಲ್ಲಿ ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ
ಭರತ್‌ರಾಜ್ ಕೃಷ್ಣಾಪುರ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಪ್ರಮುಖ್ ಹರಿಪ್ರಸಾದ್ ಸಹ ಪ್ರಮುಖ್ ರಾಕೇಶ್, ಬೂತ್ ಅಧ್ಯಕ್ಷ ರವಿ ಪೂಜಾರಿ, ಜಯಚಂದ್ರ, ಮಂಡಲ ಕೋಶಾಧಿಕಾರಿ ಪುಷ್ಪರಾಜ್, ಪ್ರಜ್ವಲ್ ಬೂತ್ ಯುವ ಮೋರ್ಚಾ ಕಾರ್ಯದರ್ಶಿ ದೀಪಕ್ ದೇವಾಡಿಗ, ಸುಕೇಶ್ ಭಟ್, ಬಿ ಎಮ್ ಅರ್ ಸಂಸ್ಥೆಯ ಕಾರ್ಯನಿರ್ವಾಹಕ‌ನಿರ್ದೇಶಕ ದಾವೂದ್ ಹಕೀಂ, ಸಿದ್ದೀಕ್ ಪ್ಲಾಜಾ, ಇಸ್ಮಾಯಿಲ್, ರಮೇಶ್ ಆಚಾರ್ಯ,ಭಾಸ್ಕರ ಸನಿಲ್,ಸುಮಿತ್ರಾ ಆನಂದ, ನಾಗೇಶ್ ಮನೋಜ್ ಮುಂತಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು