News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ: ಯಕ್ಷಗಾನದ ವೇಷಭೂಷಣ ತೊಟ್ಟು ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಗೆ ತರಾಟೆ

Bantwal Yak
Photo Credit : News Kannada

ಬಂಟ್ವಾಳ: ನವರಾತ್ರಿ ಸಂದರ್ಭದಲ್ಲಿ ವಿವಿಧ ನಮೂನೆಯ ಕಾಣಸಿಕ್ಕರೆ ಇಲ್ಲೊಬ್ಬ ವೇಷಧಾರಿ ಯಕ್ಷಗಾನದ ವೇಷ ಹಾಕಿದ್ದ ಎಂಬ‌ ಕಾರಣಕ್ಕಾಗಿ ಹಿರಿಯ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅವರು ವೇಷಧಾರಿ ವ್ಯಕ್ತಿಯನ್ನು ತಡೆದು,ವೇಷವನ್ನು ಕಳಚಿಸಿದ ಘಟನೆಯೊಂದು ಬಿಸಿರೋಡಿನಲ್ಲಿ ನಡೆದಿದ್ದು, ಅ ಸಂದರ್ಭದಲ್ಲಿ ನಡೆದ ಮಾತಿನ ವಿಡಿಯೋ ಒಂದು ವೈರಲ್ ಆಗಿದೆ‌.

ದಾವಣಗೆರೆ ಮೂಲದ ವ್ಯಕ್ತಿ ಎಂದು ಹೇಳಲಾಗಿರುವ ಈತ ಶನಿವಾರ ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣ ಮಂದಿರದ ಬಳಿ ಯಕ್ಷಗಾನದ ವೇಷ ಹಾಕಿ ಹೋಗುತ್ತಿದ್ದ ಈ ವೇಳೆ ಆಗಮಿಸಿದ ಕಲಾವಿದ ಅಶೋಕ್ ‌ಶೆಟ್ಟಿ ಸರಪಾಡಿ ಅವರು ಯಕ್ಷಗಾನದ ವೇಷ ಹಾಕುವಂತಿಲ್ಲ,ಅದನ್ನು ತೆಗೆಯುವಂತೆ ಒತ್ತಾಯ ಮಾಡುವ ಬಗ್ಗೆ ವಿಡಿಯೋದಲ್ಲಿ ಕಂಡು ಬಂದಿದೆ. ಯಕ್ಷಗಾನ ವನ್ನು ನಾವು ಇಲ್ಲಿ ಪೂಜೆ ಮಾಡುತ್ತೇವೆ ನಿನಗೆ ಗೊತ್ತುಂಟಾ? ನೀನು ವೇಷು ಹಾಕಿ ಬಿಕ್ಷೆ ಬೇಡುತ್ತಿಯಾ ಎಂದು ಪ್ರಶ್ನಿಸಿದ್ದಾರೆ.

ನಾನು ತಪ್ಪು ಮಾಡಿದ್ದರೆ ನನಗೆ ಹೊಡೆಯಿರಿ ಎಂದು ವೇಷಧಾರಿ ಹೇಳಿದಾಗ ಹೊಡೆಯುವುದು ಅಲ್ಲ ವೇಷ ತೆಗೆಯದಿದ್ದಲ್ಲಿ ಕೈ ಕಾಲು ಮುರಿದು ಹಾಕುವಂತೆ ಬೆದರಿಸಿ,ಬೈದಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ವೇಷಧಾರಿಯ ವೇಷವನ್ನು ಕಳಚಿದ ಘಟನೆಯ ಬಗ್ಗೆ ವಿಡಿಯೋ ವೈರಲ್ ಆದ ಕೂಡಲೇ ಸಾರ್ವಜನಿಕ ವಲಯದಲ್ಲಿ ಪರವಿರೋಧದ ಚರ್ಚೆಗಳು ಆರಂಭವಾಗಿದೆ. ಯಕ್ಷಗಾನದ ಕಲೆಯ ಬಗ್ಗೆ ಅಪಚಾರ ಮಾಡುವುದು ಕೂಡ ಸರಿಯಲ್ಲ‌ಅವಹೇಳನಕಾರಿಯಾಗಿ ವೇಷಧರಿಸಿ ಕಲೆಯ ಬಗ್ಗೆ ನಿಂದನೆ ಮಾಡುವ ಕೆಲಸಗಳು ನಡೆಯಬಾರದು ಎಂಬ ಕೂಗು ಒಂದೆಡೆಯಾದರೆ, ವೇಷಧಾರಿಯ ಜೊತೆ ಇವರು ನಡೆದುಕೊಂಡ ನಡವಳಿಕೆ ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿದೆ.

ಜಿಲ್ಲಾಡಳಿತ ಯಾವ ಯಾವ ವೇಷವನ್ನು ಹಾಕಬಾರದು ಎಂಬುದನ್ನು ಸುತ್ತೋಲೆ ಹೊರಡಿಸಬೇಕು. ಅಧಿಕೃತವಾಗಿ ಯಾವುದೇ ವೇಷವನ್ನು ಹಾಕಬಾರದು ಸುತ್ತೋಲೆಗಳಿಲ್ಲದ ಕಾರಣ ಅವರನ್ನು ತಡೆಯುವ ಹಕ್ಕು ಇಲ್ಲ ಎಂಬುದು ಇಲಾಖೆಯ ಸ್ಪಷ್ಟನೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು