Categories: ಮಂಗಳೂರು

ಮಂಗಳೂರಿನಲ್ಲಿ ಮೂರು ದಿನಗಳ ಬೈಬಲ್ ಪ್ರದರ್ಶನ

ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಬೈಬಲ್, ಸುವಾರ್ತ ಪ್ರಸಾರ, ಸಾಮಾಜಿಕ ಸಂಪರ್ಕ ಮತ್ತು ಕಿರು ಕ್ರೈಸ್ತ ಸಮುದಾಯದ ಆಯೋಗಗಳ ಸಹ-ಭಾಗಿತ್ವದಲ್ಲಿ ಸಂತ ಅಂತೋನಿ ಆಶ್ರಮ, ಸಂತ ಜೋಸೆಫ್ ಸೆಮಿನರಿ, ಕಾಸ್ಸಿಯಾ, ಜೆಪ್ಪು ಮತ್ತು ವೆಲೆನ್ಸಿಯಾ ಚರ್ಚ್ಗಗಳು ಜಂಟಿಯಾಗಿ ನಗರದ ಜೆಪ್ಪು, ಸಂತ ಅಂತೋನಿ ಆಶ್ರಮದಲ್ಲಿ ಗುರುವಾರ, ಜನವರಿ 26, 2023 ರಿಂದ ಮೂರು ದಿನಗಳ ಬೈಬಲ್ ಪ್ರದರ್ಶನವನ್ನು ಆಯೋಜಿಸಿವೆ.

ಕಥೊಲಿಕ ಕ್ರೈಸ್ತರ ಪೂಜಾವಿಧಿಯ ಕ್ಯಾಲೆಂಡರ್‌ನ ಮೂರನೇ ಭಾನುವಾರದಂದು ‘ಬೈಬಲ್ ಭಾನುವಾರ”ವನ್ನು ಸಾರ್ವತ್ರಿಕವಾಗಿ ಆಚರಿಸಲಾಗುತ್ತಿದೆ. ಈ ವರ್ಷ ಜನವರಿ 22, 2023 ರಂದು ಇದನ್ನು ಆಚರಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬೈಬಲ್ ಪ್ರದರ್ಶನವನ್ನು ವಿಶೇಷವಾಗಿ ನಡೆಸಲಾಗುತ್ತದೆ.

ಸಂತ ಆಂತೋನಿ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಮತ್ತು ಪ್ರದರ್ಶನದ ಸಂಚಾಲಕ ವಂದನೀಯ ಜೆ. ಬಿ. ಕ್ರಾಸ್ತಾ ಮಾತನಾಡಿ, “ಬೈಬಲ್ ಸಾರ್ವಕಾಲಿಕ ಹೆಚ್ಚು ಮಾರಾಟವಾದ ಪುಸ್ತಕವಾಗಿದೆ, ಇಲ್ಲಿಯವರೆಗೆ ಸುಮಾರು 5 ಬಿಲಿಯನ್ ಪ್ರತಿಗಳು ಮಾರಾಟವಾಗಿವೆ. ಇದು ಮಾನವ ಇತಿಹಾಸದಲ್ಲಿ ಅತಿ ಹೆಚ್ಚು ಅನುವಾದಿತ ಪುಸ್ತಕವಾಗಿದೆ,” ಎಂದು ಹೇಳಿದರು.

“ಈ ಪ್ರದರ್ಶದಲ್ಲಿ ಕ್ರೈಸ್ತ ಪವಿತ್ರ ಗ್ರಂಥ- ಬೈಬಲ್‌ನ್ನು ಸಾರ್ವಜನಿಕ ಓದುವಿಕೆಯ ಮೂಲಕ ಹಾಗೂ ಬೈಬಲ್‌ನ ಕಲೆ, ಚಿತ್ರಕಲೆ, ವೀಡಿಯೊ ಪ್ರಸ್ತುತಿ, ರಸಪ್ರಶ್ನೆ, ಹಾಡುಗಳು, ನಾಟಕಗಳು ಮತ್ತು ನೃತ್ಯಗಳ ಮೂಲಕ ಹೆಚ್ಚಿನ ಜನರನ್ನು ಆಕರ್ಷಿಸಿ ಜನರಿಗೆ ವಿಶೇಷ ಆನುಭವ ಹಾಗೂ ವಿಶ್ವಾಸದ ಪ್ರಯಾಣವನ್ನು ನೀಡಲು ಉದ್ದೇಶಿಸಿದೆ” ಎಂದು ವಂದನೀಯ ಕ್ರಾಸ್ತಾರವರು ನುಡಿದರು.

ಪಾದುವಾದ ಸಂತ ಅಂತೋನಿಯವರು ‘ದೇವರ ವಾಕ್ಯ’ದ ಉತ್ಕಟ ಬೋಧಕರಾಗಿದ್ದರು ಮತ್ತು ಅದನ್ನು ಎಲ್ಲರಿಗೂ ಘೋಷಿಸಲು ಹೆಚ್ಚಿನ ಉತ್ಸಾಹವನ್ನು ತೋರಿಸಿದವರು. ಆದ್ದರಿಂದ, ಈ ಪ್ರದರ್ಶನವನ್ನು ಜೆಪ್ಪುವಿನ ಸಂತ ಅಂತೋನಿ ಆಶ್ರಮದಲ್ಲಿ ನಡೆಸಲಾಗುತ್ತದೆ ಎಂದು ವಂದನೀಯ ಕ್ರಾಸ್ತಾರವರು ನುಡಿದರು.

ಧರ್ಮಕ್ಷೆತ್ರದ ಸುವಾರ್ತ ಪ್ರಸಾರ ಆಯೋಗದ ಕಾರ್ಯದರ್ಶಿ ಮತ್ತು ಕಾರ್ಯಕ್ರಮದ ಸಂಯೋಜಕ ವಂದನೀಯ ರೂಪೇಶ್ ತಾವ್ರೊರವರು ಮಾತಾನಾಡಿ, “ಈ ಪ್ರದರ್ಶನದಲ್ಲಿ ಬೈಬಲ್ ಪ್ರತಿಗಳ ವಿವಿಧ ಭಾಷಾಂತರಗಳು, ಬೈಬಲ್ ಕಲೆ, ಬೈಬಲ್ ಚಿತ್ರಗಳು, ಪ್ರತಿಮಾಶಾಸ್ತ್ರ, ಭಾರತೀಯ ಬೈಬಲ್ ಕಲೆ ಮತ್ತುಬೈಬಲ್ ಪ್ರದರ್ಶನ ಬೈಬಲ್ ಘಟನೆಗಳ ಕಾಲಘಟ್ಟಗಳನ್ನು ಪ್ರದರ್ಶಿಸಲಾಗುವುದು. ಜೊತೆಗೆ ಬೈಬಲ್ ಗೀತೆಗಳು, ನಾಟಕಗಳು, ಬೈಬಲ್ ವರ್ಣಚಿತ್ರಗಳು, ಬೈಬಲ್ ಕ್ವಿಜ್ ಮತ್ತು ಪ್ರಮುಖ ಬೈಬಲ್ ಘಟನೆಗಳ ಪ್ರದರ್ಶನ ಇರುವುದು” ಎಂದು ಹೇಳಿದರು.

ಪ್ರದರ್ಶನದ ಉದ್ಘಾಟನಾ ಸಮಾರಂಭವು ಗುರುವಾರ, ಜನವರಿ 26, 2023 ರಂದು ಬೆಳಿಗ್ಗೆ 10 ಗಂಟೆಗೆ ಆಶ್ರಮದ ಆವರಣದಲ್ಲಿ ನಡೆಯಲಿದೆ. ಇಂಗ್ಲಿಷ್‌ನಿಂದ ಕೊಂಕಣಿಗೆ ಬೈಬಲ್ (ಹೊಸ ಓಡಂಬಡಿಕೆ) ಅನುವಾದಕ ವಂದನೀಯ ಡಾ. ವಿಲಿಯಮ್ ಬರ್ಬೋಜಾ ಅವರು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.

ಪ್ರದರ್ಶನವು ಜ. 26 ರಿಂದ ಜ. 28 ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ. ಪ್ರತಿದಿನ ಸಂಜೆ 4.30ರಿಂದ 7ರವರೆಗೆ ಬೈಬಲ್ ಆಧಾರಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಪ್ರದರ್ಶನದ ಸಮಾರೋಪ ಸಮಾರಂಭವನ್ನು ಜನವರಿ 28ರ ಶನಿವಾರ ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.

Sneha Gowda

Recent Posts

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

11 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

23 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

3 hours ago