ಮಂಗಳೂರು: ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಾಯಗೊಂಡ ಘಟನೆ ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ಎಂಬಲ್ಲಿ ನಡೆದಿದೆ.
ಮೂಡುಬಿದಿರೆ ಕಡೆಯಿಂದ ಕಿನ್ನಿಗೋಳಿಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಹಮ್ಮಾಯಿ ದೇವಸ್ಥಾನದ ಬಳಿ ಕಾರ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರು ಪ್ರಯಾಣಿಕರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.