Categories: ಮಂಗಳೂರು

ಬೈಕ್‌ನೊಂದಿಗೆ ಕದ್ರಿ ದೇವಳಕ್ಕೆ ನುಗ್ಗಿದ ಮೂವರು ಯುವಕರು ವಶಕ್ಕೆ

ಮಂಗಳೂರು: ಐತಿಹಾಸಿಕ ಕದ್ರಿ ದೇಗುಲಕ್ಕೆ ಅಪರಿಚಿತರು ಬೈಕ್‌ನೊಂದಿಗೆ ನುಗ್ಗಿರುವ ಘಟನೆ ನಡೆದಿದೆ. ಮೂವರು ಯುವಕರು ಬೈಕ್​ನೊಂದಿಗೆಯೇ ದೇವಾಲಯದ ಆವರಣ ಪ್ರವೇಶಿಸಿದ್ದಾರೆ. ಅನುಮಾನಾಸ್ಪದವಾಗಿ ದೇಗುಲ ಪ್ರವೇಶಿಸಿದವರನ್ನು ಸ್ಥಳೀಯರು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಸೈಗೋಳಿ ನಿವಾಸಿಗಳಾದ ಹಸನ್ ಶಾಹಿನ್‌, ಜಾಫರ್‌, ಫಾರೂಕ್‌ನನ್ನು ಕದ್ರಿ ಪೊಲೀಸರಿಗೆ ಒಪ್ಪಿಸಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕದ್ರಿ ಠಾಣೆಯಲ್ಲಿ ವಶಕ್ಕೆ ಪಡೆದಿರುವವರ ತೀವ್ರ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಶಂಕಿತ ಉಗ್ರ ಶಾರಿಕ್‌ ಕದ್ರಿ ದೇಗುಲ ಟಾರ್ಗೆಟ್‌ ಮಾಡಿದ್ದ. ಕದ್ರಿ‌ ದೇಗುಲದ ಆವರಣದಲ್ಲಿ ಬಾಂಬ್‌ ಸ್ಫೋಟಕ್ಕೆ ಸಂಚು ರೂಪಿಸಿದ್ದ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಲಾಗುತ್ತಿದೆ.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago