News Karnataka Kannada
Friday, May 10 2024
ಮಂಗಳೂರು

ಮಂಗಳೂರಿನಲ್ಲಿ ಹುಲಿ ವೇಷಧಾರಿಯ ಟೋಪಿಗೆ ಬೆಂಕಿ: ತಪ್ಪಿದ ಅನಾಹುತ

Screenshot 2023 10 26 081850
Photo Credit :

ಮಂಗಳೂರು: ನಗರದಲ್ಲಿ ಹುಲಿ ವೇಷಧಾರಿಯ ಟೋಪಿಗೆ ಬೆಂಕಿ ಹತ್ತಿಕೊಂಡ ಘಟನೆಯೊಂದು ನಡೆದಿದೆ. ನವರಾತ್ರಿ, ದಸರಾ ಹಬ್ಬದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹುಲಿ ವೇಷ, ಹುಲಿ ಕುಣಿತದ ಅಬ್ಬರ ಜೋರಿರುತ್ತದೆ. ಈ ವರ್ಷವೂ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ಹುಲಿ ಕುಣಿತ ಸೇರಿದಂತೆ ವಿಜೃಂಭಣೆಯಿಂದ ದಸರಾ, ನವರಾತ್ರಿ ಆಚರಿಸಲಾಗಿದೆ. ಈ ಮಧ್ಯೆ, ಅಲ್ಲಲ್ಲಿ ಹುಲಿ ವೇಷಧಾರಿಗಳಿಗೆ ಆವೇಷ ಬಂದ ಘಟನೆಗಳೂ ವರದಿಯಾಗಿದೆ. ಇದರ ಜೊತೆಗೆ ಮತ್ತೊಂದು ಘಟನೆ ನಡೆದಿದೆ.

ಮಂಗಳೂರಿನ ಕೆಎಸ್ ರಾವ್ ರಸ್ತೆಯಲ್ಲಿ ವಿವಿಧ ಕಸರತ್ತು ಪ್ರದರ್ಶಿಸುತ್ತಿದ್ದ ಹುಲಿವೇಷಧಾರಿಗಳ ತಂಡ ಮೆರವಣಿಗೆ ಹೋಗುತ್ತಿದ್ದಾಗ ವೇಷಧಾರಿಯೊಬ್ಬರು ಬೆಂಕಿ ಸಾಹಸ ಮಾಡಲು ಮುಂದಾಗಿದ್ದಾರೆ. ಹುಲಿ ವೇಷಧಾರಿ ಬಾಯಿಯಿಂದ ಬೆಂಕಿ ಉಗುಳುವ ಸಾಹಸ ಮಾಡುತ್ತಿದ್ದಂತೆಯೇ ಅವರ ಟೋಪಿಗೆ ಧಗ್ಗನೆ ಬೆಂಕಿಹೊತ್ತಿಕೊಂಡಿದೆ. ತಕ್ಷಣ ಅವರು ಟೋಪಿಯನ್ನು ಕಿತ್ತೆಸೆದು ಮೈಗೆ ಬೆಂಕಿ ತಗುಲದಂತೆ ನೋಡಿಕೊಂಡಿದ್ದಾರೆ. ಹುಲಿ ವೇಷಧಾರಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು