News Karnataka Kannada
Sunday, May 05 2024
ಮಂಗಳೂರು

ಪರಮೇಶ್ವರ್‌ ಮನೆಯಲ್ಲಿ ಊಟಕ್ಕೆ ಹೋದ್ರೆ ಯಾಕೆ ಮಸಾಲೆ ಹಾಕುತ್ತೀರಿ: ಸಿಎಂ ಸಿದ್ದರಾಮಯ್ಯ

to english CM Siddaramaiah arrived in Mangalore
Photo Credit : News Kannada

ಮಂಗಳೂರು: ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಬಂದಿಳಿದಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿಎಂ ಮಂಗಳೂರಿಗೆ ಬಂದಿದ್ದು, ಮಂಗಳೂರು ಮೂಲಕವಾಗಿ ಉಡುಪಿಗೆ ತೆರಳಲಿದ್ದಾರೆ. ಮಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ಉಡುಪಿಗೆ ತೆರಳಿದ ಸಿಎಂ ಅವರನ್ನು ಕಾಂಗ್ರೆಸ್‌ ಮುಖಂಡರು ಸ್ವಾಗತಿಸಿದರು.

ಮಂಗಳೂರು: ಈ ವೇಳೆ ಶಾಸಕ ಹರೀಶ್ ಪೂಂಜಾ ಪೇಜ್ ನಲ್ಲಿ ಕಲೆಕ್ಷನ್ ಮಾಸ್ಟರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಹರೀಶ್ ಪೂಂಜಾ ಶಾಸಕನಾಗಿರುವುದು ಮೊನ್ನೆ ಮೊನ್ನೆ. ನಾನು 83ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು. ಆವತ್ತು ಯಾರು ನನ್ನ ಈ ರೀತಿ ಕರೆದಿರಲಿಲ್ಲ. ಅವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ ಎಂದರು. ಇನ್ನು ಬಿಜೆಪಿ ಯವರಿಂದ ಶಾಸಕರಿಗೆ 50 ಕೋಟಿ ಆಫರ್ ಬಗ್ಗೆ ನನಗೆ ಗೊತ್ತಿಲ್ಲ. ಸಿಟಿ ಹತ್ತಿರ ರವಿ ಹತ್ತಿರ ಕೇಳಿ ಎಂದರು.

ಯಾರು ಹೇಳಿಕೆ ನೀಡಿದ್ದಾರೆ. ಅವರಲ್ಲಿ ಈ ಬಗ್ಗೆ ಕೇಳಿ ನನಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೆ ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದರು. ನಾನು ಪರಮೇಶ್ವರ್ ಮನೆಯಲ್ಲಿ ಊಟಕ್ಕೆ ಕರೆದಿದ್ದರು. ಅದಕ್ಕೆ ಹೋಗಿದ್ದೇವೆ. ಅದಕ್ಕೆ ಯಾಕೆ ಮಸಾಲೆ ಹಾಕುತ್ತೀರಿ. ನಾನು ಮಹಾದೇವಪ್ಪ, ಸತೀಶ್ ಜಾರಕಿಹೊಳಿ ಊಟಕ್ಕೆ ಹೋಗಿದ್ದೆವು. ಅದರಲ್ಲಿ ಯಾವುದೇ ರಾಜಕೀಯ ವಿಚಾರ ಪ್ರಸ್ತಾಪ ಆಗಿಲ್ಲ. ಸುಖಾ ಸುಮ್ಮನೆ ಅದಕ್ಕೆಲ್ಲ ಸುಳ್ಳು, ಬಣ್ಣ ಕಟ್ಟಲಾಗುತ್ತಿದೆ ಎಂದರು.

ಇನ್ನು ನಿಗಮ ಮಂಡಳಿ ಕುರಿತು ಮಾತನಾಡಿದ ಸಿಎಂ ಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡುತ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಸ್ಥಾನ ಹಂಚಿಕೆ ಮಾಡುತ್ತೇವೆ ಎಂದರು. ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕಾಗಿ 7900 ಕೋಟಿ ರೂ. ಕೇಳಿದ್ದೇವೆ ಆದರೆ ಒಂದು ರೂ. ಪರಿಹಾರವನ್ನು ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದು ಆರೋಪಿಸಿದರು. ಅದೇ ರೀತಿ ಕಾರ್ಕಳ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ಎಂಬ ಬಗ್ಗೆ ತನಿಖೆ ನಡೆಯಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು