News Karnataka Kannada
Saturday, May 18 2024
ಮಂಗಳೂರು

ಧರ್ಮಸ್ಥಳಕ್ಕೆ ಆಗಮಿಸಿದ ಪ್ರವಾಸೋದ್ಯಮ ಇಲಾಖಾ ಸಚಿವ ಆನಂದ್‍ಸಿಂಗ್

Tourism Minister Anand Singh arrives in Dharmasthala
Photo Credit : By Author

ಬೆಳ್ತಂಗಡಿ: ಪ್ರವಾಸೋದ್ಯಮ ಇಲಾಖಾ ಸಚಿವ ಆನಂದ್‍ಸಿಂಗ್ ಶುಕ್ರವಾರ ಹೆಲಿಕಾಪ್ಟರ್‍ನಲ್ಲಿ ಧರ್ಮಸ್ಥಳಕ್ಕೆ ಬಂದಾಗ ಹೆಲಿಪ್ಯಾಡ್‍ನಲ್ಲಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಶಾಸಕ ಹರೀಶ್ ಪೂಂಜ, ಕೃಷ್ಣಸಿಂಗ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ಸುಬ್ರಹ್ಮಣ್ಯಕ್ಕೆ ತೆರಳಿ ದೇವರ ದರ್ಶನ ಹಾಗೂ ಪೂಜೆಯ ಬಳಿಕ ಧರ್ಮಸ್ಥಳಕ್ಕೆ ಬಂದು ರಾತ್ರಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಸಚಿವರು ವಾಸ್ತವ್ಯ ಇದ್ದರು.

ಶನಿವಾರ(ಡಿ.17) ನೇತ್ರಾವತಿ ಸ್ನಾನಘಟ್ಟದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದೊಂದಿಗೆ ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದೊಂದಿಗೆ ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯನ್ನು ಶನಿವಾರ ಬೆಳಿಗ್ಗೆ ಹತ್ತು ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ನೆರವೇರಿಸುವರು.

ಪ್ರವಾಸೋದ್ಯಮ ಇಲಾಖಾ ಸಚಿವ ಆನಂದ್‌ಸಿಂಗ್ ನಾಮಫಲಕ ಅನಾವರಣ ಮಾಡುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು