News Karnataka Kannada
Tuesday, April 30 2024
ಮಂಗಳೂರು

ಪ್ರವಾಸಿಗರೇ ಗಮನಿಸಿ: ಅ.3 ರಿಂದ ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Tourists should note: Kumaraparvatha trekking banned from October 3
Photo Credit : News Kannada

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ಅ. 3ರಿಂದ ನಿರ್ಬಂಧ ವಿಧಿಸಲಾಗಿದೆ.

ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಅ.3ರಿಂದ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರೀ ಮಳೆಯಿಂದ ಕಡಿದಾದ ಬೆಟ್ಟವನ್ನು ಏರಲು ಚಾರಣಿಗರಿಗೆ ಅತಿಯಾದ ಸಂಕಷ್ಟ ಮತ್ತು ಕಷ್ಟವಾಗುವ ಕಾರಣ ನಿರ್ಬಂಧ ವಿಧಿಸಲಾಗಿದೆ. ಇಲಾಖೆಯ ಈ ಆದೇಶಕ್ಕೆ ಚಾರಣಿಗರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಇಲಾಖೆ ವಿನಂತಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು