ಬಂಟ್ವಾಳ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಮಾಣಿ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಗಳನ್ನು ಸರಬರಾಜು ಮಾಡುವ ಲಾರಿಯೊಂದು ರಸ್ತೆಯ ಬದಿಗೆ ಸರಿದು ವಾಲಿ ನಿಂತ ಪರಿಣಾಮವಾಗಿ ಸುಮಾರು ತಾಸುಗಳ ಕಾಲ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆಯಿತು.
ಮಾಣಿಯ ಅಳಿರ ಎಂಬಲ್ಲಿ ರಸ್ತೆ ಪಕ್ಕಕ್ಕೆ ಲಾರಿ ಕೆಸರಿನಲ್ಲಿ ಹೂತು ಬೀಳುವ ಹಂತಕ್ಕೆ ವಾಲಿಕೊಂಡಿತ್ತು. ಇದರ ಪರಿಣಾಮವಾಗಿ ಏಕಮುಖ ಸಂಚಾರದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
ರಾಷ್ಟ್ರೀಯ ಹೆದ್ದಾರಿ ಅವರ ಕಾಮಗಾರಿಯ ಹಿನ್ನೆಲೆಯಲ್ಲಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ ಕಂಪೆನಿ ಅರ್ಧ ಡಾಮರು ಅರ್ಧ ಮಣ್ಣಿನ ರಸ್ತೆಯನ್ನು ನಿರ್ಮಾಣ ಮಾಡಿಕೊಟ್ಟಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಸಂಚಾರಕ್ಕೆ ಯೋಗ್ಯವಾದ ಬದಲಿ ರಸ್ತೆ ನಿರ್ಮಾಣ ಮಾಡಿಕೊಡದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಜನರು ರಸ್ತೆ ಯ ಗುಂಡಿಯಲ್ಲಿ ಬಿದ್ದು ಎದ್ದು ಹೈರಾಣಾಗಿದ್ದಾರೆ. ಆದರೆ ಕಂಪೆನಿ ಮತ್ತು ಇಲಾಖೆ ಈ ಬಗ್ಗೆ ಯಾವುದೇ ತಲೆಕೆಡಿಸಿಕೊಂಡಿಲ್ಲ.
ಇಂದು ಬೆಳಿಗ್ಗೆ ಕೆಲಸಕ್ಕೆ ಹೋಗುವ ಬಸ್ ಪ್ರಯಾಣಿಕರಿಗೆ ಇಲ್ಲಿನ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸಮಯಕ್ಕೆ ಸರಿಯಾಗಿ ತರಲು ಸಾಧ್ಯವಾಗದೆ ತೊಂದರೆಯಾಗಿದೆ ಎಂದು ದೂರಿಕೊಂಡಿದ್ದಾರೆ.
ಬೆಂಗಳೂರಿನಿಂದ ಮುಂಜಾನೆ ಆಗಮಿಸುವ ಬಸ್ ಗಳು ಮಂಗಳೂರಿಗೆ ಸಮಯಕ್ಕೆ ಸರಿಯಾಗಿ ತಲುಪದೆ ಸಮಸ್ಯೆಯಲ್ಲಿ ಸಿಲುಕಿಕೊಂಡಿದೆ.