ಮಂಗಳೂರು: ರಕ್ತಚಂದನ ಮರ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಕರಿಮಣೇಲು ಎಂಬಲ್ಲಿ ಸಿಐಡಿ ಅರಣ್ಯ ಘಟಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 125 ಕೆಜಿ ರಕ್ತಚಂದನ ಮರವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ರಕ್ತ ಚಂದನ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಬಂಟ್ವಾಳ ತಾಲೂಕು ಮಾವಿನಕಟ್ಟೆ ನಿವಾಸಿ ಖಾಲಿದ್, ಗುರುವಾಯನಕೆರೆ ನಿವಾಸಿ ದೀಕ್ಷಿತ್ ಎಂಬುವರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರೋ ಆರೋಪಿ ಸಂತೋಷ್ ಗಾಗಿ ಹುಡುಕಾಟ ನಡೆದಿದೆ. ಹೆಚ್ಚಿನ ತನಿಖೆಗಾಗಿ ವೇಣೂರು ಅರಣ್ಯಾಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರ ಮಾಡಲಾಗಿದೆ.