ಉಜಿರೆ: ಬಸ್ಗಾಗಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಗಾಂಧಿನಗರದ ಬಳಿ ನಡೆದಿದೆ.
ಗಾಂಧಿನಗರದ ಕೃಷ್ಣಪ್ಪ(52) ಹಾಗೂ ಮೋಹಿನಿ(56) ಮೃತ ರ್ದುದೈವಿಗಳು. ಇನ್ನು ಲಾರಿ ಡಿಕ್ಕಿ ರಭಸಕ್ಕೆ 2 ವಿದ್ಯುತ್ ಕಂಬಗಳು ಧರೆಗುರುಳಿದಿದ್ದು, ಕಟ್ಟಡದ ಒಂದು ಭಾಗಕ್ಕೆ ಹಾನಿಯಾಗಿದೆ ಎನ್ನಲಾಗಿದೆ.
ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.