ಮಂಗಳೂರು: ನಗರದ ಹಂಪನಕಟ್ಟೆ ಸಿಗ್ನಲ್ ಬಳಿ ಮೂರು ಸಿಟಿ ಬಸ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಟೇಟ್ ಬ್ಯಾಂಕ್ ನಿಂದ ಕುಂಜತ್ತಬೈಲ್ ಕಡೆಗೆ ಹೋಗುತ್ತಿದ್ದ ಬಸ್, ತಲಪಾಡಿ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ತಲಪಾಡಿಗೆ ಹೋಗುತ್ತಿದ್ದ ಬಸ್, ಅದರ ಮುಂಭಾಗದಲ್ಲಿದ್ದ ನೀರುಮಾರ್ಗದ ಬಸ್ಸಿನ ಹಿಂಭಾಗಕ್ಕೆ ಬಡಿದಿದೆ.
ಇನ್ನು ಘಟನೆಯಲ್ಲಿ ಮೂರು ಬಸ್ ಗಳು ಜಖಂಗೊಂಡಿದ್ದು, ಕುಂಜತ್ತಬೈಲ್ನ ಬಸ್ ನ ಮುಂಭಾಗ ಮತ್ತು ತಲಪಾಡಿ ಬಸ್ ನ ಹಿಂಭಾಗ ಮತ್ತು ಮುಂಭಾಗದ ಗಾಜುಗಳು ಪುಡಿಯಾಗಿದ್ದು, ಹಾನಿ ಸಂಭವಿಸಿದೆ. ನೀರುಮಾರ್ಗ ಬಸ್ ನ ಹಿಂಭಾಗಕ್ಕೂ ಹಾನಿಯಾಗಿದೆ.
ಕುಂಜತ್ತಬೈಲ್ ಬಸ್ ನ ಡ್ರೈವರ್ ಮತ್ತು ಡ್ರೈವರ್ ಪಕ್ಕದ ಅಡ್ಡ ಸೀಟ್ ನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಇನ್ನು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಸ್ ಗಳನ್ನು ತೆರವುಗೊಳಿಸಿ, ವಾಹನ ಸಂಚಾರ ಸುಗಮಗೊಳಿಸಿದ್ದಾರೆ.
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…
ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.