News Karnataka Kannada
Thursday, May 02 2024
ಮಂಗಳೂರು

ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಕ್ಯಾಬ್‌ ಮಾಲೀಕರಿಗೆ ದೊರೆಯದ ಹಣ

Two months after the elections, cab owners are yet to get the money
Photo Credit : News Kannada

ಮಂಗಳೂರು: ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಚುನಾವಣಾ ಕರ್ತವ್ಯದಲ್ಲಿದ್ದ ಚಾಲಕರಿಗೆ ಬಾಡಿಗೆ ಪಾವತಿ ಆಗದ ಕಾರಣ ಕಾರಣ ಕ್ಯಾಬ್‌ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಸರಿಯಾಗಿ ಕ್ಯಾಬ್ ಗಳ ಬಾಡಿಗೆ ಪಾವತಿ ಮಾಡಿಲ್ಲ ಎಂದು ಆರೋಪಿಸಿರುವ ಕ್ಯಾಬ್‌ ಮಾಲೀಕರು ದಕ್ಷಿಣ ಕನ್ನಡ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಸುಮಾರು 150ಕ್ಕೂ ಅಧಿಕ ವಿವಿಧ ಕ್ಯಾಬ್ ಬಳಕೆ ಮಾಡಲಾಗಿತ್ತು. ಮಾರ್ಚ್ ೩೦ರಿಂದ ಮೇ ೧೫ರ ತನಕ ಚುನಾವಣಾ ಕರ್ತವ್ಯಕ್ಕೆ ಕ್ಯಾಬ್‌ ಗಳನ್ನು ಬಳಕೆ ಮಾಡಲಾಗಿತ್ತು. ಆದರೆ ಅಧಿಕಾರಿಗಳು ಶೇ. 50ರಷ್ಟು ಹಣ ಪಾವತಿಸಿ ಕೈ ತೊಳೆದುಕೊಂಡಿದ್ದಾರೆ ಎಂದು ಕ್ಯಾಬ್‌ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಸಂದರ್ಭ ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಿದ್ದೇವೆ. ಹಲವು ಷರತ್ತುಗಳ ನಡುವೆ ಶ್ರದ್ದೆಯಿಂದ ಚುನಾವಣಾ ಕರ್ತವ್ಯಕ್ಕೆ ಕ್ಯಾಬ್ ನೀಡಿದ್ದೇವೆ. ಆದರೆ ಅಧಿಕಾರಿಗಳು, ಜಿಲ್ಲಾಡಳಿತ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕ್ಯಾಬ್‌ ಮಾಲೀಕರು ಹೇಳಿದ್ದು, ಈ ಬಗ್ಗೆ ಸಮರ್ಪಕ ಸ್ಪಂದನೆ ದೊರೆಯದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನು ಕ್ಯಾಬ್‌ ಮಾಲೀಕರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು