ಮಂಗಳೂರು: ಸೌಜನ್ಯ ಪರವಾಗಿ ಬೆಳ್ತಂಗಡಿಯಲ್ಲಿ ಇಂದು (ಆ.27) ಬಿಜೆಪಿ ಪ್ರತಿಭಟನೆ ನಡೆಸಿದೆ. ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಬಾಗ ಸೌಜನ್ಯ ತಾಯಿ ಕುಸುಮಾವತಿ ಪ್ರಾರ್ಥನೆ ಮಾಡಿದ್ದಾರೆ. ನೈಜ ಆರೋಪಿಗಳ ಪತ್ತೆಗೆ ಅಣ್ಣಪ್ಪ ಸ್ವಾಮಿಗೆ ಕಾಣಿಕೆ ಹಾಕಿ ಕಣ್ಣೀರಿಟ್ಟು, ವಿಹಿಂಪ ಹಾಗು ಬಜರಂಗದಳ ಮುಖಂಡರ ಜೊತೆಗೂಡಿ ಪ್ರಾರ್ಥನೆ ಸಲ್ಲಿದ್ದಾರೆ.
ಬಳಿಕ ಈ ಪ್ರಕರಣದಲ್ಲಿ ಸೌಜನ್ಯ ತಾಯಿ ಆರೋಪಿಸಿರುವ ಮಲ್ಲಿಕ್ ಜೈನ್, ಉದಯ್ ಜೈನ್, ಧೀರಜ್ ಕೆಲ್ಲ ಕೂಡ ಈ ಪ್ರಕರಣದಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಅನಾವಶ್ಯಕವಾಗಿ ಎಳೆದು ತರಲಾಗಿದೆ. ಎಂದು ಸಾವಿರಾರು ಜನರ ಮುಂಭಾಗ ಪ್ರಾರ್ಥನೆ ಮಾಡಿದ್ದಾರೆ.
ಸೌಜನ್ಯ ನ್ಯಾಯಕ್ಕಾಗಿ ವಿಶ್ವ ಹಿಂದು ಪರಿಷತ್ ಭಜರಂಗ ದಳದ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಹಮ್ಮಿಕೊಂಡ ನೇತ್ರಾವತಿಯಿಂದ ಅಣ್ಣಪ್ಪ ಸ್ವಾಮಿ ಬೆಟ್ಟದ ವರೆಗಿನ ಪಾದಯಾತ್ರೆ ಬಳಿಕ ಪ್ರಮಾಣ ಕೈಗೊಳ್ಳಲಾಯಿತು.
ಬಳಿಕ ಮಾತನಾಡಿದ ಧೀರಜ್ ಕೆಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರ ಮುಂದೆಯೇ ನಾವು ಪ್ರಮಾಣ ಕೈಗೊಂಡಿದ್ದೇವೆ. ನಾವು ನಿರ್ದೋಷಿಗಳೆಂದು ಸಾಬೀತಾಗಿದೆ. ವಿನಾಕಾರಣ ನಮ್ಮ ಹೆಸರನ್ನು ಸಮಾಜದಲ್ಲಿ ಹಾಳುಗೆಡವಲಾಗುತ್ತಿದೆ. ಇದಕ್ಕೆ ದೇವರೆ ತಕ್ಕ ಶಿಕ್ಷೆ ನೀಡಬೇಕು ಎಂದರು.
ವಿಹಿಂಪ ಸಂಘಟನೆಯ 200 ಕ್ಕೂ ಅಧಿಕ ಮಂದಿ ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳ ದ್ವಾರದವರೆಗೆ ಶಿವ ಪಂಚಾಕ್ಷರಿ ಪಠಣದೊಂದಿಗೆ ಕಾಲ್ನಡಿಗೆಯಲ್ಲಿ ಸಾಗಿ ಬಂದರು.
ದ.ಕ. ಎಸ್.ಪಿ. ರಿಷ್ವಂತ್ ಅವರು ಪ್ರತಿಭಟನೆಗಾರರನ್ನು ಧರ್ಮಸ್ಥಳ ದ್ವಾರದ ಬಳಿ ತಡೆದು, ಸೌಜನ್ಯ ಕುಟುಂಬಸ್ಥರು ಹಾಗೂ ವಿಹಿಂಪದ ಪ್ರಮುಖರನ್ನಷ್ಟೆ ದ್ವಾರದ ಒಳ ಪ್ರವೇಶಕ್ಕೆ ಅನುಮತಿ ಮಾಡಿಕೊಟ್ಟರು.