News Karnataka Kannada
Sunday, April 28 2024
ಮಂಗಳೂರು

ಉಡುಪಿ: ಬಿಜೆಪಿಯ ಹಿಂದುತ್ವದ ಪ್ರಯೋಗ ಶಾಲೆಯಲ್ಲಿ ಕಮಲ ಕಲಿಗಳ ಜಯಭೇರಿ

Udupi: Victory of Kamala Kalis in BJP's Hindutva Experiment School
Photo Credit :

ಮಂಗಳೂರು: ಮಂಗಳೂರು: ಬಿಜೆಪಿಯ ಹಿಂದುತ್ವದ ಪ್ರಯೋಗ ಶಾಲೆ ಉಡುಪಿಯಲ್ಲಿ ಬಿಜೆಪಿಯ ಬೇರು ಆಳದಲ್ಲಿದ್ದು, ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತಷ್ಟು ಬಲಗೊಂಡಿದೆ.

ಈ ಬಾರಿ ಬಿಜೆಪಿ ಹೈಕಮಾಂಡ್‌ ಹೊಸ ಪ್ರಯೋಗವೊಂದನ್ನು ರಾಜ್ಯದಲ್ಲಿ ಮಾಡಿತ್ತು. ಅನೇಕ ಹೊಸ ಮುಖಗಳಿಗೆ ಟಿಕೆಟ್‌ ಕೊಡುವ ಮೂಲಕ ಬಿಜೆಪಿ ಸಾಮಾನ್ಯ ಕಾರ್ಯಕರ್ತರ ಪಕ್ಷ ಎಂದು ಸಾಬೀತು ಮಾಡಲು ಮುಂದಾಗಿತ್ತು. ಆದರೆ ಈ ಪ್ರಯೋಗ ಕೆಲ ಕ್ಷೇತ್ರದಲ್ಲಿ ಕೈ ಕೊಟ್ಟರೂ, ಉಡುಪಿಯಲ್ಲಿ ಬಿಜೆಪಿ ಪ್ರಯೋಗ ಯಶಸ್ಸು ಕಂಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ಹೊರತು ಪಡಿಸಿ ಉಳಿದ ಕುಂದಾಪುರ, ಕಾಪು, ಬೈಂದೂರು, ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿತ್ತು. ಇದೀಗ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಐದು ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್‌ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ್ದಾರೆ.

ಉಡುಪಿ ಕ್ಷೇತ್ರದಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಯಶಪಾಲ್ ಸುವರ್ಣ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಯಶಸ್ಸು ಕಂಡಿದ್ದು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಿದ್ದಾರೆ. ಇನ್ನು ಮಾಜಿ ಸಚಿವ ಕಾಂಗ್ರೆಸ್‌ ಅಭ್ಯರ್ಥಿಗೆ ವಿನಯ್ ಕುಮಾರ್ ಸೊರಕೆ ಅವರಿಗೆ ಈ ಬಾರಿಯೂ ಸೋಲಾಗಿದೆ.
ವ್ಯಕ್ತಿ ವರ್ಚಸ್ಸಿನ ಮೇಲೆ ನಿಂತಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೂಡ ಬಿಜೆಪಿ ಗೆಲುವು ಸಾಧಿಸಿದ್ದು, ಹಾಲಾಡಿ ಶ್ರೀನಿವಾಸ ಶೆಟ್ಟಿ ಬೆಂಬಲಿತ ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿ ಇಪ್ಪತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಸೋಲಾಗಿದೆ. ಬೈಂದೂರು ಕ್ಷೇತ್ರದಲ್ಲಿ ಈ ಬಾರಿ ಸಾಮಾನ್ಯ ಕಾರ್ಯಕರ್ತನಿಗೆ ಬಿಜೆಪಿ ಟಿಕೆಟ್‌ ನೀಡಿತ್ತು. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಬದಲಿಗೆ ಉತ್ತಮ ಜನ ಬೆಂಬಲ ಹೊಂದಿದ್ದ ಗುರುರಾಜ ಗಂಟಿಹೊಳಿ ಅವರಿಗೆ ಟಿಕೆಟ್‌ ನೀಡಿತ್ತು. ಸದ್ಯ ಬೈಂದೂರು ಕ್ಷೇತ್ರ ಬಿಜೆಪಿ ಪಾಲಾಗಿದ್ದು, ಗುರುರಾಜ ಗಂಟಿಹೊಳಿ ಮಾಜಿ ಶಾಸಕ ಕಾಂಗ್ರೆಸ್‌ ಅಭ್ಯರ್ಥಿ ಗೋಪಾಲ ಪೂಜಾರಿಯವರಿಗೆ ಮತ್ತೊಮ್ಮೆ ಸೋಲು ಅನುಭವಿಸುವಂತೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು