ಉಜಿರೆ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಎಸ್.ಟಿ ವಿದ್ಯಾರ್ಥಿ ನಿಲಯ ಉಜಿರೆಯಲ್ಲಿ ವಿದ್ಯಾರ್ಥಿಗಳಿಂದ ೭೫ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಸ್ವಾತಂತ್ರ್ಯದ ಆಜಾದಿ ಕಾ ಅಮೃತ ಮಹೋತ್ಸವದ ಕುರಿತು ಮಾತನಾಡಿದ ವಿದ್ಯಾರ್ಥಿ ಅರವಿಂದ,ನಾಡಿಗೆ ಇಂದು ಹೆಮ್ಮೆಯ ಸಂದರ್ಭ ಸರ್ವರೂ ದೇಶಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸಬೇಕು, ಸ್ವಾತಂತ್ರ್ಯದ ಇತಿಹಾಸವನ್ನು ಯುವಪೀಳಿಗೆ ಪರಿಚಯಿಸಬೇಕು ಎಂದರು. ವಿದ್ಯಾರ್ಥಿಗಳು ಬಾವುಟಕ್ಕೆ ಪುಷ್ಪಾರ್ಚನೆ ಮಾಡಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಾಸ್ಟೆಲ್ ನ ಸಿಬ್ಬಂದಿ ವರ್ಗದವರಾದ ಸಂಪತ್ತ್ , ಬಸವರಾಜ,ಗೋಪಿ ಹಾಗು ನಿಲಯದ ವಿದ್ಯಾರ್ಥಿಗಳು ಭಾಗಿಯಾಗಿದ್ದರು.