ಉಜಿರೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಳೆದ ಮೇ ೨೨ ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದು ,ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ನಮಿತ ಕೆ ಪೂಜಾರಿ ,ಉಪಾಧ್ಯಕ್ಷೆ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ,ಕಾರ್ಯದರ್ಶಿ ಸಿಂಧೂ ಡಿನ್ನಿಸ್, ರೇವತಿ ಉಜಿರೆ ,ಸದಸ್ಯರಾದ ಕಸ್ತೂರಿ ಪೂಜಾರಿ , ಕುಸುಮ ಮಾಚಾರು ಮೊದಲಾದವರು ಉಪಸ್ಥಿತರಿದ್ದರು