Categories: ಮಂಗಳೂರು

ಉಜಿರೆ: ಎರಡನೇ ಬಾರಿಗೆ ಜಯಶಾಲಿಯಾದ ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜ

ಉಜಿರೆ: ಜಿಲ್ಲೆಯ ಪ್ರತಿಷ್ಠಿತ ಹಾಗೂ ಎಲ್ಲರ ಕುತೂಹಲ ಕೆರಳಿಸಿದ್ದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ ಜಿದ್ದಿ ಪೈಪೋಟಿಯಲ್ಲಿ ಅಂತಿಮವಾಗಿ ಅಭಿವೃದ್ಧಿಯ ಹರಿಕಾರರೆಂದೇ ಜನಪ್ರಿಯರಾದ ಬಿಜೆಪಿ ಪಕ್ಷದ ಅಭ್ಯರ್ಥಿ ,ಶಾಸಕ ಹರೀಶ್ ಪೂಂಜ ಅವರು ಜಯಭೇರಿ ಬಾರಿಸಿ ಎರಡನೇ ಬಾರಿಗೆ ವಿಧಾನ ಸಭೆ ಪ್ರವೇಶಿಸಲು ಜನಾದೇಶ ಪಡೆದಿದ್ದಾರೆ.

ಅವರು ಅಂತಿಮ ಸುತ್ತಿನ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು 18,216 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಬಿಜೆಪಿಯ ಹರೀಶ್ ಪೂಂಜ ಅವರಿಗೆ 1,01,004 ಮತ ಗಳು ಲಭಿಸಿದ್ದರೆ, ಕಾಂಗ್ರೆಸ್ ಅಭ್ಯರ್ತಿ ರಕ್ಷಿತ್ ಶಿವರಾಂ ಅವರಿಗೆ 82,788 ಮತ ಗಳು ಲಭಿಸಿವೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಿ ಯುವ ನಾಯಕ ಹರೀಶ್ ಪೂಂಜ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದಲ್ಲಿ 8 ಮಂದಿ ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ಭಾರಿ ಪೈಪೋಟಿ ನಡೆದಿತ್ತು.

ಜಾತ್ಯತೀತ ಜನತಾದಳದಿಂದ ಸ್ಪರ್ದಿಸಿದ್ದ ಅಶ್ರಫ್ ಅಲಿ ಕುಞ ಅವರು 556 ಮತಗಳನ್ನು ಪಡೆದಿದ್ದು,ಎಸ್ .ಡಿ.ಪಿ ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು 2513 ಮತಗಳನ್ನು ಪಡೆದಿದ್ದಾರೆ. ತುಳುವೆರೆ ಪಕ್ಷದ ಶೈಲೇಶ್ ಆರ್ .ಜೆ ಅವ 308 ಮತ ,ಆಮ್ ಆದ್ಮಿ ಪಕ್ಷದಿಂದ ಸಾರ್ಡಿಸಿದ್ದ ಜನಾರ್ದನ ಬಂಗೇರ 278 ಮತ ,ಸರ್ವೋದಯ ಕರ್ನಾಟಕ ಪಕ್ಷದಿಂದ ಸ್ಪರ್ದಿಸಿದ್ದ ಆದಿತ್ಯ ನಾರಾಯಣ ಕೊಲ್ಲಾಜೆ 454 ಮತ, ಪಕ್ಷೇತರರಾಗಿ ಸ್ಪರ್ದಿಸಿದ್ದ ಮಹೇಶ್ ಆಟೋ 214 ಮತಗಳನ್ನು ಪಡೆದು ಇಡುಗಂಟು ಕಳೆದುಕೊಂಡಿದ್ದಾರೆ.

ನೋಟಾ ಕ್ಕೆ 892 ಮತಗಳು ಬಿದ್ದಿವೆ. ಬಿಜೆಪಿ ಪಕ್ಷದ ಚುನಾಯಿತ ಅಭ್ಯರ್ಥಿ ಹರೀಶ್ ಪೂಂಜ ಅವರಿಗೆ ಚುನಾವಣಾಧಿಕಾರಿ ಯೋಗೀಶ್ ಎಚ್. ಆರ್. ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಜಯಂತ ಕೋಟಿಯಾನ್ ,ಪ್ರಮುಖರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಶಶಿಧರ ಕಳ್ಮಂಜ ,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Ashika S

Recent Posts

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

8 mins ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

17 mins ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

36 mins ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

49 mins ago

ಡಿ.ಕೆ ಶಿವಕುಮಾರ್ ಅವರದ್ದೇ ಒಂದು ಪೆನ್ ಡ್ರೈವ್ ಇದೆ : ಯತ್ನಾಳ್ ಸ್ಪೋಟಕ ಹೇಳಿಕೆ

ಬೀದರ್‌ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದುಪೆನ್ ಡ್ರೈವ್ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ,ಡಿ.ಕೆ ಶಿವಕುಮಾರ್ ಅವರದ್ದೇ…

2 hours ago

ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ…

2 hours ago