ಉಜಿರೆ: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂತಿಮ ಘಟ್ಟದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಸುಮಧುರ ಗೀತೆಗಳ ಗಾಯನದ ಮೂಲಕ ಸ್ವರಾಭಿಷೇಕವೇ ನಡೆಯಿತು. ಆ ಮೂಲಕ ಮೂರು ದಿನಗಳ ಅಕ್ಷರ ಜಾತ್ರೆ ಪೂರ್ಣ ಮುಕ್ತಾಯ ಕಂಡಿತು.
“ಹುಟ್ಟಿದರೆ ಕನ್ನಡ ನಾಡಲ್ಲೇ ಹುಟ್ಟಬೇಕು..” “ಕರುನಾಡ ತಾಯಿ ಸದಾ ಚಿನ್ಮಯಿ..” ಮುಂತಾದ ಗೀತೆಗಳ ಮೂಲಕ ಸ ರಿ ಗ ಮ ಪ ಖ್ಯಾತಿಯ ಗಾಯಕ ರಜತ್ ಮಯ್ಯ ಅವರು ಕನ್ನಡ ಸಾಹಿತ್ಯ ಸಮ್ಮೇಳನದ ಅಂತ್ಯವನ್ನೂ ಅಮೋಘವನ್ನಾಗಿಸಿದರು. ಪ್ರೇಕ್ಷಕರ ಅನನ್ಯ ಪ್ರತಿಕ್ರಿಯೆ ಹಾಗೂ ಒತ್ತಾಯದ ಮೇರೆಗೆ ಆನಂದಾಶ್ಚರ್ಯಗಳಿಗೊಳಗಾಗಿ ಮತ್ತಷ್ಟು ಹಾಡುಗಳನ್ನು ಪ್ರಸ್ತುತಪಡಿಸಿ ಪ್ರೇಕ್ಷಕರ ಮನ ತಣಿಸುವ ಪ್ರಯತ್ನ ಮಾಡಿದರು.
“ಕಾಣದ ಕಡಲಿಗೆ ಹಂಬಲಿಸಿದೆ ಮನ..”, “ಈ ಭೂಮಿ ಬಣ್ಣದ ಬುಗುರಿ..”, ಹೇ ರುಕ್ಕಮ್ಮ..” ಮುಂತಾದ ಹಾಡುಗಳನ್ನು ಹಾಡಿದರಲ್ಲದೆ, ಸಭಿಕರೂ ತನ್ನೊಂದಿಗೆ ಹಾಡುವಂತೆ ಮಾಡಿ ಸಂಗೀತ ಸಂಜೆಯ ಮೆರುಗನ್ನು ಇಮ್ಮಡಿಗೊಳಿಸಿದರು. ಆನಂದತುಂದಿಲರಾದ ಪ್ರೇಕ್ಷಕರು ಕೈಗಳನ್ನು ಹಾಡಿನ ಮೋಡಿಗೆ ಲಯಬದ್ಧವಾಗಿ ಅತ್ತಿಂದಿತ್ತ ಇತ್ತಿಂದತ್ತ ಬೀಸುತ್ತ ಕುಳಿತಲ್ಲೇ ಲಘುವಾಗಿ ನರ್ತಿಸಲು ಆರಂಭಿಸಿ ಕಾರ್ಯಕ್ರಮದ ಅಂತ್ಯದ ವೇಳೆಗೆ ಕುಣಿಯಲು ಆರಂಭಿಸಿದರು.
ಗಾಯಕರ ಹಾಡಿಗೆ ತಂದೆ ರಮೇಶ್ ಮಯ್ಯ ಅವರು ಕಾರ್ಯಕ್ರಮ ನಿರೂಪಣೆ ಮಾಡಿದ್ದು, ಅಮ್ಮನ ಪ್ರೀತಿಯನ್ನು ವರ್ಣಿಸುವ ಸಾಲುಗಳಿಗೆ ವೇದಿಕೆಗೆ ತನ್ನ ತಾಯಿಯನ್ನೇ ಗಾಯಕರು ಕರೆಸಿ ಎಲ್ಲರಿಗೂ ಪರಿಚಯಿಸಿದ್ದು ಮತ್ತೊಂದು ವಿಶೇಷವಾಗಿತ್ತು.
ವರದಿ : ರಕ್ಷಾ ಕೋಟ್ಯಾನ್,
ಚಿತ್ರ: ಶಶಿಧರ ನಾಯ್ಕ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…