ಉಜಿರೆ: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಖ್ಯಾತ ಹಾಸ್ಯ ಕಲಾವಿದ ಪಟ್ಟಾಭಿರಾಮ ಸುಳ್ಯ ಅವರು ನಡೆಸಿಕೊಟ್ಟ ನಗೆಹಬ್ಬ ಕಾರ್ಯಕ್ರಮವು ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತು.
ತಮ್ಮ ಅದ್ಭುತವಾದ ಮಿಮಿಕ್ರಿ ಕಲೆಯ ಮೂಲಕ ಹಾಸ್ಯಲೋಕಕ್ಕೆ ಕರೆದೊಯ್ದರು. ದೈನಂದಿನ ಜೀವನದಲ್ಲಿ ಕೇಳಿಬರುವ ಸೈರನ್ ಸದ್ದು, ಆ್ಯಂಬುಲೆನ್ಸ್, ವಿಮಾನ ಮುಂತಾದ ವಾಹನಗಳ ಸದ್ದಿನೊಂದಿಗೆ ಹಕ್ಕಿಗಳ ಕಲರವ, ಹಸು, ಕೋಗಿಲೆ, ಕಾಗೆ, ಕೋಳಿ ಇನ್ನಿತರ ಪ್ರಾಣಿ ಪಕ್ಷಿಗಳ ಕೂಗು, ಮಕ್ಕಳ ಮಾತಿನ ಶೈಲಿ, ಚಿಕ್ಕ ಮಕ್ಕಳ ಅಳು ಮತ್ತು ನಗುವನ್ನು ವಿನೂತನವಾಗಿ ಸಾದರಪಡಿಸುವ ಮೂಲಕ ನೆರೆದಿದ್ದ ಕಲಾಪ್ರೇಮಿಗಳನ್ನು ರಂಜಿಸಿದರು.
ವಿವಿಧ ಸನ್ನಿವೇಶಗಳಲ್ಲಿ ವ್ಯಕ್ತವಾಗುವ ಮುಖಭಾವಗಳನ್ನು ನವರಸಗಳ ಮೂಲಕ ತೋರ್ಪಡಿಸಿದರು. ತನ್ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡುವಲ್ಲಿ ಯಶಸ್ವಿಯಾದರು.
ಇದರ ಜೊತೆಗೆ ಕನ್ನಡದ ಪ್ರಮುಖ ರಾಜಕೀಯ ನಾಯಕರ ಮತ್ತು ಸಾಹಿತಿಗಳ ಮುಖಭಾವ ಮತ್ತು ವೇಷಭೂಷಣ ಧರಿಸಿ ಮಿಮಿಕ್ರಿಯೊಂದಿಗೆ ಅಭಿನಯಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸ್ಮರಣ ಸಂಚಿಕೆ ಸಮಿತಿಯ ಸಹಸಂಚಾಲಕ ಪ್ರೊ. ಗಣಪತಿ ಭಟ್ ಕುಳಮರ್ವ ಅವರು ಪಟ್ಟಾಭಿರಾಮ ಸುಳ್ಯ ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಸಾಂಸ್ಕೃತಿಕ ಸಮಿತಿಯ ಸದಸ್ಯೆ ವಿದ್ಯಾಶ್ರೀ ಅಡೂರು ಕಾರ್ಯಕ್ರಮ ನಿರೂಪಿಸಿದರು.
ವರದಿ: ಅನುರಾಗ್ ಗೌಡ, ನಿಶಾಲ್ ಲೋಬೊ
ಚಿತ್ರ: ಸಮರ್ಥ್ ಭಟ್
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ
ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…
ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…
ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ…
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…