ಉಜಿರೆ: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ಸಂಪನ್ನಗೊಂಡ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ರಂಗು ಸಮ್ಮೇಳನಕ್ಕೆ ವಿಶೇಷ ಮೆರುಗು ನೀಡಿತು.
ಸಂಜೆ ಸಮ್ಮೇಳನದ ಸಮಾರೋಪದ ಬಳಿಕ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮದ ಮುಂಚೂಣಿಯಲ್ಲಿ ಮಂಗಳೂರು ಮತ್ತು ಉಜಿರೆಯ ವಿಶೇಷಚೇತನ ಮಕ್ಕಳ ಶಾಲೆ ‘ಸಾನಿಧ್ಯ’ದ ಮಕ್ಕಳಿಂದ ನಾಲ್ಕು ಕಾರ್ಯಕ್ರಮಗಳು ನಡೆದವು.
ಮೊದಲಿಗೆ ಮೂಡಿಬಂದ ‘ಭಕ್ತ ಪ್ರಹ್ಲಾದ’ ಯಕ್ಷಗಾನ ಪ್ರದರ್ಶನದಲ್ಲಿ ಮಕ್ಕಳು ನುರಿತ ಕಲಾವಿದರಿಗೂ ಕಡಿಮೆ ಇಲ್ಲದ ರೀತಿಯಲ್ಲಿ ಪ್ರಸಂಗ ಪ್ರದರ್ಶಿಸಿ ಸೈ ಎನಿಸಿಕೊಂಡರು. ಬಳಿಕ ಮಂಗಳೂರಿನ ‘ಸಾನಿಧ್ಯ’ ಶಾಲಾ ವಿದ್ಯಾರ್ಥಿನಿ ಪೂಜಾ ಅವರ ಗಾಯನ, ಉಜಿರೆಯ ಶಾಲಾ ವಿದ್ಯಾರ್ಥಿನಿಗಳಿಂದ “ಘಲ್ಲು ಘಲ್ಲೆನುತಾವ್ ಗೆಜ್ಜೆ” ಹಾಡಿಗೆ ಸಾಮೂಹಿಕ ನೃತ್ಯ ನಡೆಯಿತು. ಬಳಿಕ, ಸುಮಾರು 50 ಕಡೆಗಳಲ್ಲಿ ಯಶಸ್ವಿ ಪ್ರದರ್ಶನಗೊಂಡ ‘ಅಮರ್ ಜವಾನ್’ ಎಂಬ ಸೈನಿಕರ ಜೀವನಾಧಾರಿತ ವಿಶೇಷ ಕಾರ್ಯಕ್ರಮಕ್ಕೆ ವೇದಿಕೆ ಸಾಕ್ಷಿಯಾಯಿತು. ಸಾನಿಧ್ಯದ ಸಂಸ್ಥಾಪಕ ನಿರ್ದೇಶಕ ಡಾ. ವಸಂತ ಕುಮಾರ್ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಏಕವ್ಯಕ್ತಿ ಭರತನಾಟ್ಯ
ಬಳಿಕ, ಪದ್ಯಾಣದ ವಿದುಷಿ ಪ್ರಣತಿ ಚೈತನ್ಯ ಅವರಿಂದ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನಗೊಂಡಿತು. ಶ್ರೀಕೃಷ್ಣನ ಬಾಲಲೀಲೆ, ಶ್ರೀರಾಮ- ಶೂರ್ಪನಖಿಯರ ಸಂಭಾಷಣೆ, ರಾಮನ ಬಗೆಗೆ ಶಬರಿಯ ಭಕ್ತಿಪರಾಕಾಷ್ಠೆಯನ್ನು ನೃತ್ಯದ ಮೂಲಕ ಸಾದರಪಡಿಸಿದರು. ಸುಮಾರು 45 ನಿಮಿಷಗಳ ಕಾಲ ಕಲಾಪ್ರೇಮಿಗಳನ್ನು ರಂಜಿಸಿದರು.
ಕೊನೆಯಲ್ಲಿ ‘ಸ ರಿ ಗ ಮ ಪ’ ಖ್ಯಾತಿಯ ರಜತ್ ಮಯ್ಯ ಅವರ ತಂಡದಿಂದ ಸುಮಧುರ ಗೀತೆಗಳ ಗಾಯನ ನಡೆಯಿತು.
ವರದಿ: ಭಾರತಿ ಹೆಗಡೆ,
ಚಿತ್ರಗಳು: ಶಶಿಧರ ನಾಯ್ಕ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.