ಉಜಿರೆ: ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷಿಪ್ರ ಬೆಳವಣಿಗೆ ಹಾಗೂ ಆಧುನಿಕ ಕಾಲದ ವೇಗೋತ್ಕರ್ಷದಿಂದಾಗಿ ಸಾಕಷ್ಟು ಮಾನಸಿಕ ಪರಿವರ್ತನೆಯಾಗಿದ್ದು ನಮ್ಮ ಭಾವನೆಗಳು ಹಾಗೂ ಚಿಂತನಾ ಲಹರಿ ವಿಚಲಿತವಾಗಿದೆ. ಇಂದು ಗೂಗಲ್ ಗುರುವಾಗಿದ್ದು ಬ್ರೈನ್ ಮೆಮೊರಿ ಚಿಪ್ ಮೆಮೊರಿಯಾಗಿದೆ. ಬರೆಯುವ ಶಿಕ್ಷಣಕ್ಕಿಂತ ಬದುಕಿನ ಶಿಕ್ಷಣ ಮುಖ್ಯವಾಗಿದ್ದು ವಿದ್ಯೆಯೊಂದಿಗೆ ವಿನಯ, ಸೌಜನ್ಯ, ದಯೆ, ಅನುಕಂಪ, ಸೇವಾಕಳಕಳಿ, ಪರೋಪಕಾರ ಮೊದಲಾದ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಡಾ. ಧರ್ಮಪಾಲನಥ ಸ್ವಾಮೀಜಿ ಹೇಳಿದರು.
ಅವರು ಶುಕ್ರವಾರ ಗುರುವಾಯನಕೆರೆಯಲ್ಲಿ ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬದ ಅಂಗವಾಗಿ ಪರಂಪರಾ ದಿನ ಆಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ನಮ್ಮ ಸನಾತನ ಧರ್ಮದ ಮರ್ಮವನ್ನರಿತು, ಸಂಪ್ರದಾಯಗಳು ಹಾಗೂ ಹಬ್ಬಹರಿದಿನಗಳ ಆಚರಣೆಯ ಹಿಂದೆ ಇರುವ ನೀತಿ, ನಿಯಮಗಳು, ಸಂಸ್ಕಾರವನ್ನು ತಿಳಿದುಕೊಂಡು ಮಾನವೀಯತೆಯೊಂದಿಗೆ ಮಾನವ ಧರ್ಮವನ್ನು ಪಾಲಿಸಬೇಕು. ವಿದ್ಯೆಯ ಜೊತೆ ವಿನಯ, ಶ್ರದ್ಧೆ, ಭಕ್ತಿ ಮತ್ತು ಗುರು-ಹಿರಿಯರಲ್ಲಿ ಗೌರವ ಭಾವನೆ ಇದ್ದಾಗ ಮಾತ್ರ ವಿದ್ಯಾವಂತರು ಬುದ್ಧಿವಂತರೂ, ಹೃದಯ ಶ್ರೀಮಂತಿಕೆಯುಳ್ಳವರೂ ಆಗಿ ಸಾರ್ಥಕ ಜೀವನ ನಡೆಸಬಹುದು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪಡೆದ ಜ್ಞಾನದ ಬೆಳಕನ್ನು ಬಿತ್ತರಿಸಿ, ವಿಸ್ತರಿಸಿ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಬೇಕು ಎಂದು ಸ್ವಾಮಿಜಿ ಸಲಹೆ ನೀಡಿದರು.
ಪರಂಪರಾ ದಿನಾಚರಣೆಯನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನೂ ಮೈಗೂಡಿಸಿಕೊಳ್ಳಬೇಕು. ಸಾವಿರಾರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಸನಾತನ ಸಂಸ್ಕೃತಿಯ ವಿಸ್ಮೃತಿ ಸಲ್ಲದು. ಕೀಳರಿಮೆ ಹೊಂದಬಾರದು. ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ಭಾರತ “ವಿಶ್ವಗುರು”ವಿನ ಸ್ಥಾನ ಹೊಂದುವ ಅರ್ಹತೆಯನ್ನು ಪಡೆದಿದೆ ಎಂದು ಹೇಳಿದರು.
ಸ್ವಾಮೀಜಿಗಳು ಮತ್ತು ಗುರುಪೀಠಗಳು ತ್ಯಾಗದ ಸಂಕೇತವಾಗಿದ್ದು ಸಮಾಜಕ್ಕೆ ನಿರಂತರ ಮಾರ್ಗದರ್ಶನ ನೀಡಿ ಸನ್ಮಾರ್ಗದಲ್ಲಿ ಸಾಗಲು ನಿರಂತರ ಪ್ರೋತ್ಸಾಹ ನೀಡುತ್ತಾರೆ ಎಂದರು.
ಪ್ರತಾಪಸಿಂಹ ನಾಯಕ್ರ ೬೩ನೆ ಜನ್ಮದಿನವನ್ನು ಸಮಾರಂಭದಲ್ಲಿ ಸರಳವಾಗಿ ಆಚರಿಸಲಾಯಿತು. ವಿದ್ಯಾರ್ಥಿನಿಯರು ಆರತಿ ಬೆಳಗಿ ತಿಲಕವಿಟ್ಟು ಜನ್ಮದಿನದ ಶುಭಾಶಯ ಸಲ್ಲಿಸಿದರೆ ವೇದಿಕೆಯಲ್ಲಿರುವ ಗಣ್ಯರು ಶುಭ ಕೋರಿ ಹರಸಿದರು.
ಸಂಸ್ಥೆಯ ಅಧ್ಯಕ್ಷ ಸಮಂತ್ ಕುಮಾರ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಬೇಕಾದ ಮಾಹಿತಿ ಹಾಗೂ ತರಬೇತಿ ನೀಡಿ ಅವರ ಉನ್ನತ ಶಿಕ್ಷಣಕ್ಕೆ ಅವಕಾಶ ನೀಡಲಾಗುತ್ತದೆ. ಧರ್ಮ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡುವುದೇ ಪರಂಪರಾದಿನ ಆಚರಣೆಯ ಉದ್ದೇಶವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ ಅಳದಂಗಡಿ ಅಜಿಲ ಸೀಮೆಯ ಅರಸರಾದ ಡಾ. ಪದ್ಮಪ್ರಸಾದ ಅಜಿಲ ಮಾತನಾಡಿ, ಶಿಕ್ಷಣದೊಂದಿಗೆ ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು. ಸಮ್ಯಕ್ ದರ್ಶನ, ಸಮ್ಯಕ್ ಜ್ಞಾನ ಮತ್ತು ಸಮ್ಯಕ್ ಚಾರಿತ್ರ್ಯ ಎಂಬ ತ್ರೈರತ್ನ ಧರ್ಮಗಳ ಪಾಲನೆಯಿಂದ ಜೀವನ ಪಾವನವಾಗುತ್ತದೆ. ವಿದ್ಯಾರ್ಥಿಗಳು ಪಾಠದ ಜೊತೆಗೆ ದಿನದ ಸ್ವಲ್ಪ ಸಮಯವನ್ನು ಕ್ರೀಡೆಗಳಿಗೂ ಮೀಸಲಿಡಬೇಕು ಎಂದು ಅವರು ಸಲಹೆ ನೀಡಿದರು.
ಆಡಳಿತ ಮಂಡಳಿ ಕಾರ್ಯದರ್ಶಿ ಅಭಿರಾಮ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ದರ್ಶನ ರಾವ್ ಧನ್ಯವಾದವಿತ್ತರು. ವಿಕಾಸ್ ಕಾರ್ಯಕ್ರಮ ನಿರ್ವಹಿಸಿದರು.
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.
ಟಿಕೆಟ್ ಕೇಳಿದಾಗ ಮುಸುಕುಧಾರಿಯೊಬ್ಬ ಐವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ.