News Karnataka Kannada
Sunday, April 28 2024
ಮನರಂಜನೆ

ಉಜಿರೆ: ಸಾಹಿತ್ಯ ಸಮ್ಮೇಳನದಲ್ಲಿ ಮನತಣಿಸಿದ ತಾಳಮದ್ದಳೆ

Ujire: Taalamaddale at sahitya sammelan
Photo Credit : News Kannada

ಉಜಿರೆ, ಫೆ.4: ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಇದರ ವತಿಯಿಂದ ತಾಳಮದ್ದಳೆ ನಡೆಯಿತು. ಭಾಸ್ಕರ ಬಾರ್ಯ ಅವರು ನಿರ್ದೇಶಿಸಿರುವ ‘ಯಕ್ಷಭ್ರಾತೃ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.

ಇವರು ಕಳೆದ 17 ವರ್ಷಗಳಿಂದ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ತಂಡವು ಮಹಿಳೆಯರ ಭಾಗವತಿಕೆಯಿಂದಲೇ ಪ್ರಸಿದ್ಧಿ ಪಡೆದಿದೆ.

ಹಿಮ್ಮೇಳದಲ್ಲಿ ಭಾಗವತರಾಗಿ ಮುರಳಿಕೃಷ್ಣ ತೆಂಕಬೈಲು, ಚೆಂಡೆಯಲ್ಲಿ ಮುರಳಿಧರ ಕಲ್ಲೂರಾಯ ಕುಂಜೂರುಪಂಜ ಹಾಗೂ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ ಸಹಕರಿಸಿದರು.

ಮುಮ್ಮೇಳದಲ್ಲಿ ಅರ್ಥಧಾರಿಗಳಾಗಿ ಶುಭಾ ಅಡಿಗ ಶ್ರೀರಾಮನಾಗಿ, ಕಿಶೋರಿ ದುಗ್ಗಪ್ಪ ನಡಂಕಲ್ಲು ಅವರು ಲಕ್ಷ್ಮಣನಾಗಿ, ಶುಭಾ ಗಣೇಶ್ ಶ್ರೀಕೃಷ್ಣನಾಗಿ, ಹರಿಣಾಕ್ಷಿ ಜೆ. ಶೆಟ್ಟಿ ಬಲರಾಮನಾಗಿ ಪಾತ್ರ ನಿರ್ವಹಿಸಿದರು.

ಕಲಾವಿದರನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ಮುರಳಿಕೃಷ್ಣ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

ವರದಿ: ಶಿವಕುಮಾರ

ಚಿತ್ರ: ಶಶಿಧರ ನಾಯ್ಕ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು